ಬೆಂಗಳೂರು: ವೀಕೆಂಡ್ ಬೆನ್ನಲ್ಲೇ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.
ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ನವಯುಗ ಟೋಲ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟೋಲ್ ಮೂಲಕ ಸಾವಿರಾರು ವಾಹನಗಳು ಹೊರ ಜಿಲ್ಲೆಗಳಿಗೆ ಪಯಣ ಬೆಳೆಸುತ್ತಿದೆ.

ಜೂನ್ 8 ರಿಂದ 5ನೇ ಹಂತದ ಲಾಕ್ ಡೌನ್ ಸಡಿಲಿಕೆ ಆಗಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳು ಓಪನ್ ಆಗಲಿದ್ದು, ಹೀಗಾಗಿ ಜನರು ಇಂದೇ ಹೊರಟ್ರಾ ಅನ್ನೋ ಅನುಮಾನ ಮೂಡಿದೆ. ಯಾಕೆಂದರೆ ಗುಂಪು ಗುಂಪಾಗಿ ಬೆಂಗಳೂರಿನಿಂದ ವಾಹನಗಳ ದಂಡೇ ಹೊರ ಹೋಗುತ್ತಿದೆ.
ಇತ್ತ ನವಯುಗ ಟೋಲ್ನಲ್ಲಿ ಟೋಲ್ ಫ್ರೀ ಬಿಡುತ್ತಿದ್ದಂತೆಯೇ ಎರಡು ಲಾರಿಗಳ ನಡುವೆ ಅಪಘಾತ ಕೂಡ ಸಂಭವಿಸಿದೆ.

Laxmi News 24×7