Breaking News

ರಾಜ್ಯ ಪೊಲೀಸ್ ಮಹಾನಿರ್ದೇಶಕ(DGP) ಪ್ರವೀಣ್ ಸೂದ್‍ಗೆ ಇದೀಗ ಕೊರೊನಾ ಭೀತಿ ಎದುರಾಗಿದೆ.

Spread the love

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ(DGP) ಪ್ರವೀಣ್ ಸೂದ್‍ಗೆ ಇದೀಗ ಕೊರೊನಾ ಭೀತಿ ಎದುರಾಗಿದೆ.

ಬಳ್ಳಾರಿಯ ಪೊಲೀಸ್ ಸಿಬ್ಬಂದಿಗೆ ಶನಿವಾರ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇದರಿಂದಾಗಿ ಪ್ರವೀಣ್ ಸೂದ್ ಅವರಿಗೂ ಕೊರೊನಾ ಭೀತಿ ಎದುರಾಗಿದೆ. ಜಿಲ್ಲೆಯ ಹೊಸಪೇಟೆಯ ಮೂವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಎರಡು ದಿನಗಳ ಹಿಂದೆ ಪ್ರವೀಣ್ ಸೂದ್ ಬಳ್ಳಾರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. 40ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇವರ ಪೈಕಿ ಕೊರೊನಾ ಸೋಂಕಿತರಾದ ಟಿಬಿ ಡ್ಯಾಂನ ಸಿಪಿಐ ಕೂಡ ಇದ್ದರು. ಪ್ರವೀಣ್ ಸೂದ್ ಅವರು ಬಳ್ಳಾರಿ ಭೇಟಿಗೆ ಬಂದಾಗ ಟಿಬಿ ಡ್ಯಾಂ ಸಿಪಿಐ ಜೊತೆಯಲ್ಲಿಯೇ ಇದ್ದರು. ಹೀಗಾಗಿ ಪ್ರವೀಣ್ ಸೂದ್ ಅವರಿಗೂ ಇದೀಗ ಕೊರೊನಾ ಭೀತಿ ಎದುರಾಗಿದೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ