Breaking News
Home / ಜಿಲ್ಲೆ / ಬೆಂಗಳೂರು / ರಸ್ತೆ ಮಧ್ಯೆಯೇ ಯುವತಿಯನ್ನು ಎಳೆದಾಡಿದ್ದ ಬೆಂಗಳೂರಿನ ಕಾಮುಕ ಬಂಧನ………..

ರಸ್ತೆ ಮಧ್ಯೆಯೇ ಯುವತಿಯನ್ನು ಎಳೆದಾಡಿದ್ದ ಬೆಂಗಳೂರಿನ ಕಾಮುಕ ಬಂಧನ………..

Spread the love

ಬೆಂಗಳೂರು (ಏ. 28): ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯ ಮೈ ಮುಟ್ಟಿ, ಕೈ ಕಚ್ಚಿ ಪರಾರಿಯಾಗಿದ್ದ ಬೆಂಗಳೂರಿನ ಕಾಮುಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ದೇಶಾದ್ಯಂತ ಲಾಕ್​ಡೌನ್​ ಘೋಷಣೆ ಆದಮೇಲೆ ಅಪರಾಧ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿದೆ ಎಂದು ವರದಿಯೊಂದು ತಿಳಿಸಿತ್ತು. ಆದರೆ, ಮನೆಯಿಂದ ಹೊರಗೆ ಹೋಗಲೂ ಯೋಚಿಸಬೇಕಾದ ಪರಿಸ್ಥಿತಿ ಇದ್ದರೂ ಅಪರಾಧ ಪ್ರಕರಣಗಳು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಇದಕ್ಕೆ ಉದಾಹರಣೆಯೆಂಬಂತೆ ಲಾಕ್​ಡೌನ್​​ ಬಳಿಕವೂ ಅಲ್ಲಲ್ಲಿ ಕೊಲೆ, ಅತ್ಯಾಚಾರ, ಸುಲಿಗೆ, ವಂಚನೆ, ಅಪಹರಣದ ಪ್ರಕರಣಗಳು ನಡೆಯುತ್ತಲೇ ಇವೆ.

Bangalore Crime: ರಸ್ತೆ ಮಧ್ಯೆಯೇ ಯುವತಿಯನ್ನು ಎಳೆದಾಡಿದ್ದ ಬೆಂಗಳೂರಿನ ಕಾಮುಕ ಬಂಧನ

ಬೆಂಗಳೂರಿನ ಸಿದ್ದಾರ್ಥ ನಗರದ ನಿವಾಸಿಯಾಗಿರುವ 21 ವರ್ಷದ ಮೊಹಮ್ಮದ್ ಫಯಾಜ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಏ. 25ರಂದು ಅಕ್ಕಿಪೇಟೆ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯ ಮೈ ಮುಟ್ಟಿ, ಎಳೆದಾಡಿದ್ದ ಈತನ ದಿಢೀರ್ ವರ್ತನೆಗೆ ಯುವತಿ ಕಂಗಾಲಾಗಿದ್ದಳು. ಮೈ ಮುಟ್ಟಿ ಎಳೆದಾಡಿದ್ದರಿಂದ ಬಿಡಿಸಿಕೊಳ್ಳಲು ಹೆಣಗಾಡಿದ ಆಕೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದಳು. ಸಿಕ್ಕಿಹಾಕಿಕೊಳ್ಳುವ ಭಯದಲ್ಲಿ ಯುವತಿಯ ಕೈ ಕಚ್ಚಿ ಪರಾರಿಯಾಗಿದ್ದ ಕಾಮುಕನನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಈ ಘಟನೆಯ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಳು. ಈ ಪ್ರಕರಣ ಸಂಬಂಧ ಐಪಿಸಿ 354(A) ಅಡಿ ಆರೋಪಿ ವಿರುದ್ದ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಮೊಹಮ್ಮದ್‌ ಫಯಾಜ್​ನನ್ನು ಬಂಧಿಸಿರುವ ಕಾಟನ್ ಪೇಟೆ ಪೊಲೀಸರು ಆತನನ್ನು ಜೈಲಿಗೆ ಹಾಕಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ