Breaking News

ಪರಿಷತ್ ಚುನಾವಣೆ ನಾಮಪತ್ರ ಸಲ್ಲಿಸಿದ , ಅಭ್ಯರ್ಥಿಗಳು………

Spread the love

ಬೆಂಗಳೂರು: ವಿಧಾನ ಪರಿಷತ್​ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪಸಿಂಹ ನಾಯಕ್, ಸುನಿಲ್ ವಲ್ಯಾಪುರೆ, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್​​ ಹಾಗೂ ಕಾಂಗ್ರೆಸ್​​ ಅಭ್ಯರ್ಥಿಗಳಾದ ಬಿ.ಕೆ ಹರಿಪ್ರಸಾದ್​ ಮತ್ತು ನಸೀರ್ ಅಹ್ಮದ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ನಾಲ್ವರು ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದರು. ಬಳಿಕ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಲ್ವರೂ ನಾಮಪತ್ರ ಸಲ್ಲಿಸಿದ್ರು. ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟಿಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ ಹಾಗೂ ಶಾಸಕರಾದ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.
ಕಾಂಗ್ರೆಸ್​ನ ಹರಿಪ್ರಸಾದ್​, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ದಿನೇಶ್ ಗುಂಡುರಾವ್ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ್ರು. ಹಾಗೇ ನಜೀರ್​ ಅಹಮ್ಮದ್​​ ಅವರ ನಾಮಿನೇಷನ್ ವೇಳೆ ಮಾಜಿ ಸಚಿವ ಯು.ಟಿ.ಖಾದರ್, ರಹೀಂ ಖಾನ್ ಹಾಗೂ ಶಾಸಕ ಹ್ಯಾರೀಸ್ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ