Breaking News
Home / ಜಿಲ್ಲೆ / ಅಮಾವಾಸ್ಯೆ ದಿನ ಭೀಕರ ಅಪಘಾತದಲ್ಲಿ ಮೂವರು ಸಾವು- ವ್ಹೀಲಿಂಗ್ ವೇಳೆ ಡಿಕ್ಕಿ ಶಂಕೆ….

ಅಮಾವಾಸ್ಯೆ ದಿನ ಭೀಕರ ಅಪಘಾತದಲ್ಲಿ ಮೂವರು ಸಾವು- ವ್ಹೀಲಿಂಗ್ ವೇಳೆ ಡಿಕ್ಕಿ ಶಂಕೆ….

Spread the love

ಬೆಂಗಳೂರು: ಅಮಾವಾಸ್ಯೆ ದಿನ ಭೀಕರ ಸಂಭವಿಸಿ ಮೂವರು ಯುವಕರು ಧಾರುಣ ಸಾವು ಕಂಡ ಘಟನೆ ಯಲಹಂಕದ ಜೆಕೆವಿಕೆ ಬಳಿ ಇಂದು ಬೆಳಗ್ಗೆ ನಡೆದಿದೆ.

ಬೆಂಗಳೂರಿನ ನಿವಾಸಿಗಳಾದ ಮಹಮ್ಮದ್ ಆದಿ ಆಯಾನ್ (16), ಮಾಜ್ ಅಹಮ್ಮದ್ ಖಾನ್(17) ಹಾಗೂ ಸಯ್ಯದ್ ರಿಯಾಜ್ (22) ಮೃತ ದುರ್ದೈವಿಗಳು. ವ್ಹೀಲಿಂಗ್ ಮಾಡುವ ವೇಳೆ ಬೈಕ್ ಮುಖಾ ಮುಖಿ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.

ಯುವಕರು ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದರು. ಈ ವೇಳೆ ವೇಗವಾಗಿದ್ದ ಬೈಕ್ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಬೈಕ್ ಪೀಸ್ ಪೀಸ್ ಆಗಿದ್ದು, ತಲೆಗೆ ಅಪ್ಪಚ್ಚಿಯಾಗಿ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಯುವಕರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ