ಬೆಂಗಳೂರು: ಮಹಾಮಾರಿ ಕೊರೊನಾ ರಾಜ್ಯವನ್ನು ಒಕ್ಕರಿಸಿದ ಬಳಿಕ ಜನ ಜೀವನ ಅಸ್ತವ್ಯಸ್ತವಾಗಿದ್ದಲ್ಲದೇ, ಕೆಲವರು ಸೋಂಕಿಗೆ ಹೆದರಿ ಆತ್ಮಹತ್ಯೆ ಕೂಡ ಮಾಡಿಕೊಳ್ಳುತ್ತಿದ್ದಾರೆ. ಅಂತೆಯೇ ನಗರದ ಕೆ.ಸಿ ಜನರಲ್ ಆಸ್ಪತೆಯಲ್ಲಿಯೂ ಕೂಡ ಅಂತದ್ದೇ ಘಟನೆಯೊಂದು ನಡೆದಿದೆ.
ಹೌದು. ಕುಣಿಗಲ್ ಮೂಲದ 60 ವರ್ಷದ ವೃದ್ಧೆ ಕೊರೊನಾ ಪಾಸಿಟಿವ್ ದೃಢಪಟ್ಟು ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ನಿನ್ನೆ ತಡರಾತ್ರಿ 2 ಗಂಟೆ ಸುಮಾರಿಗೆ ಬಾತ್ ರೂಮ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ವೃದ್ಧೆ ನಗರದ ರಾಜಗೋಪಾಲ ನಗರದಲ್ಲಿ ವಾಸವಾಗಿದ್ದರು. ಕಳೆದ 18ರಂದು ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ವೃದ್ಧೆ, ಸೊಸೆ, ಮೊಮ್ಮಗ ಸೇರಿ ಮೂವರು ಆಸ್ಪತ್ರೆ ಗೆ ದಾಖಲಾಗಿದ್ದರು. ಆದರೆ ಇದೀಗ ವೃದ್ಧೆ ಆತ್ಮಹತ್ಯೆಗೆ ಶರಣಾಗಿದ್ದಾರೆ.