Breaking News

ಅಟ್ಟಾಡಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ………..

Spread the love

ಬೆಂಗಳೂರು: ವ್ಯಕ್ತಿಯೊಬ್ಬ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಜಗೋಪಾಲನಗರದ ಲವಕುಶನಗರದಲ್ಲಿ ನಡೆದಿದೆ.

ಹೇಮಾ ಕೊಲೆಯಾದ ದುರ್ದೈವಿ. ಆರೋಪಿ ಪತಿ ಮಂಜುನಾಥ್ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಕುಣಿಗಲ್ ಮೂಲದ ಹೇಮಾಗೆ ಆರೋಪಿ ಮಂಜುನಾಥ್ ಜೊತೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ಮೃತ ಹೇಮಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಂಗಳವಾರ ಸಂಜೆ ಹೇಮಾ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಳು. ಅದೇ ವಿಚಾರವಾಗಿ ಮನೆಯಲ್ಲಿ ಗಲಾಟೆ ಆಗಿದೆ.

ಈ ವೇಳೆ ಆರೋಪಿ ಹೇಮಾಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಗಾಬರಿಯಿಂದ ಪತ್ನಿ ಮನೆಯಿಂದ ಹೊರಗೆ ಓಡಿ ಬಂದಿದ್ದಾಳೆ. ಆದರೆ ಪತಿ ಆಕೆಯನ್ನು ಹಿಂಬಾಲಿಸಿಕೊಂಡು ಮನೆಯಿಂದ ಬೀದಿಗೆ ಬಂದಿದ್ದಾನೆ. ಅಲ್ಲದೇ ಬೀದಿಯಲ್ಲಿ ಅಟ್ಟಾಡಿಸಿ ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ಮಂಜುನಾಥ್ ಎಸ್ಕೇಪ್ ಆಗಿದ್ದಾನೆ.

ಮಾಹಿತಿ ತಿಳಿದು ರಾಜಗೋಪಾಲನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಈ ಕುರಿತು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ

Spread the love ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ ಇಳಕಲ್ ಹೊರವಲಯದ ರಾಷ್ಟ್ರೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ