Breaking News

“ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯ ರಾಜ್ಯಗಳ ಕಾರ್ಮಿಕರ ಹಿತ ಕಾಯಲು ಸರ್ಕಾರ ಬದ್ಧ”

Spread the love

ಬೆಂಗಳೂರು,ಮೇ.2- ಸದ್ಯದಲ್ಲಿಯೆ ನಗರದಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಬೃಹತ್ ನಿರ್ಮಾಣ ಚಟುವಟಿಕೆಗಳು ಆರಂಭವಾಗುವುದಿದ್ದು, ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಕಾರ್ಮಿಕರಿಗೆ ಸಚಿವ ಸುರೇಶ್‍ಕುಮಾರ್ ಸಲಹೆ ನೀಡಿದರು.

ಯಶವಂತಪುರದ ಎಪಿಎಂಸಿ ಹಾಗೂ ಮಾಗಡಿ ರಸ್ತೆಯ ಕಾವೇರಿಪುರ ಗುಡ್ಡದಲ್ಲಿ ಬಹುವಸತಿ ಸಮುಚ್ಛಯ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರನ್ನು ಭೇಟಿ ಮಾಡಿ ಮಾತನಾಡಿದ ಅವರು, ಸರ್ಕಾರವು ತಮ್ಮೆಲ್ಲರ ಹಿತ ಕಾಯಲು ಸದಾ ಬದ್ದವಾಗಿದೆ ಎಂದು ಹೇಳಿದರು.

ಎಲ್ಲಾ ಕಾರ್ಮಿಕರಿಗೆ ನೀಡಬೇಕಿರುವ ಬಾಕಿಯನ್ನು ಕೂಡಲೇ ನೀಡಲು ಸೂಚಿಸಿದರಲ್ಲದೇ, ತಕ್ಷಣದಿಂದಲೇ ಕಾಮಗಾರಿಗಳು ಆರಂಭಿಸುವಂತೆ ಎಲ್ಲ ಪೂರ್ವಭಾವಿ ಕ್ರಮಗಳಿಗೆ ಆಗ್ರಹಿಸಿದರು.

ಈ ವೇಳೇ ಕಾರ್ಮಿಕರಿಗೆ ಆಹಾರ ಧಾನ್ಯಗಳನ್ನು ವಿತರಿಸಿದ ಸಚಿವರು, ಬೆಂಗಳೂರು ನಗರದ ಹಲವಾರು ಸ್ಥಳಗಳಲ್ಲಿ ಹೀಗೆ ಹಲವು ದಿನಗಳಿಂದ ನೆಲೆಸಿರುವ, ಉತ್ತರಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳ ಸಾವಿರಾರು ಕೂಲಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಆತಂಕದಿಂದ ಸಿದ್ಧರಾಗುತ್ತಿದ್ದು, ಇವರುಗಳು ಇಲ್ಲಿಯೇ ನೆಲೆಸುವಂತೆ ಸರ್ಕಾರದ ಪರವಾಗಿ ತಾವು ಖುದ್ದಾಗಿ ತೆರಳಿ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಸಚಿವರೊಂದಿಗೆ ಹಿರಿಯ ಐ ಎ ಎಸ್ ಅಧಿಕಾರಿ ಕುಮಾರ್ ನಾಯಕ್, ಸೇರಿದಂತೆ ಸ್ಥಳೀಯ ಪೆÇಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ

Spread the loveಬೆಂಗಳೂರು: ಸಿಲಿಕಾನ್‌ ಸಿಟಿಯ ಸಂಚಾರ ನಾಡಿ ನಮ್ಮ ಮೆಟ್ರೋ ಪ್ರಯಾಣ ಮತ್ತಷ್ಟು ದುಬಾರಿಯಾಗಿದೆ. ಪ್ರತಿವರ್ಷ ಫೆಬ್ರುವರಿ ತಿಂಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ