Breaking News

ಆನ್​ಲೈನ್ ಶಿಕ್ಷಣದ ಹೆಸರಲ್ಲಿ ಶೋಷಣೆಯಾದರೆ ಕಠಿಣ ಕ್ರಮ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಎಚ್ಚರಿಕೆ

Spread the love

ಬೆಂಗಳೂರು: ಲಾಕ್ ಡೌನ್ ಆಗಿ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾದ ಬಳಿಕ ಆನ್​ಲೈನ್​ನಲ್ಲಿ ಪಾಠ ಮಾಡಲು ಅವಕಾಶ ಕೊಡಲಾಗಿದೆ. ಅದೇ ರೀತಿ ಹಲವು ಕಡೆ ಈಗಾಗಲೇ ಆನ್​ಲೈನ್​ನಲ್ಲೇ ತರಗತಿಗಳು ಪ್ರಾರಂಭವಾಗಿವೆ. ಕೆಲ ಶಿಕ್ಷಣ ಸಂಸ್ಥೆಗಳಂತೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ವಿಪರೀತ ಒತ್ತಡ ಹೇರುತ್ತಿವೆ. ದಿನವಿಡೀ ಆನ್​ಲೈನ್ ಕ್ಲಾಸ್ ಎಂದು ಹೈರಾಣಗೊಳಿಸುತ್ತಿವೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಧ್ಯ ಪ್ರವೇಶಿಸಿದ್ದು, ಆನ್​ಲೈನ್ ಶಿಕ್ಷಣದ ಹೆಸರಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೂ ಆನ್​ಲೈನ್ ತರಗತಿ ಕೊಡಲಾಗುತ್ತಿದೆ. ಆದರೆ, ಖಾಸಗಿ ಶಾಲೆಗಳು ವೈಜ್ಞಾನಿಕ ಆಧಾರವಿಲ್ಲದೆ ಮಕ್ಕಳ ಅನವಶ್ಯಕ ಶೋಷಣೆಗೆ ಮುಂದಾಗಬಾರದು. ಆನ್​ಲೈನ್​​ನಲ್ಲಿ ತರಗತಿ ನಡೆಸುವ ಮುನ್ನ ಮಕ್ಕಳ ಗಮನ ಅವಧಿ(Attention Span) ಹಾಗೂ ಅಡ್ಡಪರಿಣಾಮಗಳನ್ನ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಶಿಕ್ಷಣ ಸಚಿವರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ತಾಕೀತು ಮಾಡಿದ್ದಾರೆ.

ಅನಗತ್ಯವಿದ್ದರೂ ದಿನವಿಡೀ ಆನ್​ಲೈನ್ ತರಗತಿ ನೀಡುತ್ತಿರುವ ಕ್ರಮಗಳಿಗೆ ಕಡಿವಾಣ ಹಾಕಲು ಕೂಡಲೇ ಸುತ್ತೋಲೆ ಹೊರಡಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಚಿವರು ಸೂಚಿಸಿದ್ಧಾರೆ.


Spread the love

About Laxminews 24x7

Check Also

ತುರ್ತು ಪ್ರತಿಕ್ರಿಯೆ ಸಹಾಯಕ್ಕೆ 112 ಜೊತೆ 14416 ಸಂಯೋಜನೆ

Spread the loveಬೆಂಗಳೂರು: ಮಾನಸಿಕ ಆರೋಗ್ಯ ಸಂಕಷ್ಟ ಅನುಭವಿಸುತ್ತಿರುವ ವ್ಯಕ್ತಿಗಳಿಗೆ ಸಮಯೋಚಿತ ಸಹಾಯ ಒದಗಿಸಲು ಹಾಗೂ ಆತಹತ್ಯೆ ಅಪಾಯ ಸೇರಿದಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ