Breaking News

ಆನ್​ಲೈನ್ ಶಿಕ್ಷಣದ ಹೆಸರಲ್ಲಿ ಶೋಷಣೆಯಾದರೆ ಕಠಿಣ ಕ್ರಮ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಎಚ್ಚರಿಕೆ

Spread the love

ಬೆಂಗಳೂರು: ಲಾಕ್ ಡೌನ್ ಆಗಿ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾದ ಬಳಿಕ ಆನ್​ಲೈನ್​ನಲ್ಲಿ ಪಾಠ ಮಾಡಲು ಅವಕಾಶ ಕೊಡಲಾಗಿದೆ. ಅದೇ ರೀತಿ ಹಲವು ಕಡೆ ಈಗಾಗಲೇ ಆನ್​ಲೈನ್​ನಲ್ಲೇ ತರಗತಿಗಳು ಪ್ರಾರಂಭವಾಗಿವೆ. ಕೆಲ ಶಿಕ್ಷಣ ಸಂಸ್ಥೆಗಳಂತೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ವಿಪರೀತ ಒತ್ತಡ ಹೇರುತ್ತಿವೆ. ದಿನವಿಡೀ ಆನ್​ಲೈನ್ ಕ್ಲಾಸ್ ಎಂದು ಹೈರಾಣಗೊಳಿಸುತ್ತಿವೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಧ್ಯ ಪ್ರವೇಶಿಸಿದ್ದು, ಆನ್​ಲೈನ್ ಶಿಕ್ಷಣದ ಹೆಸರಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೂ ಆನ್​ಲೈನ್ ತರಗತಿ ಕೊಡಲಾಗುತ್ತಿದೆ. ಆದರೆ, ಖಾಸಗಿ ಶಾಲೆಗಳು ವೈಜ್ಞಾನಿಕ ಆಧಾರವಿಲ್ಲದೆ ಮಕ್ಕಳ ಅನವಶ್ಯಕ ಶೋಷಣೆಗೆ ಮುಂದಾಗಬಾರದು. ಆನ್​ಲೈನ್​​ನಲ್ಲಿ ತರಗತಿ ನಡೆಸುವ ಮುನ್ನ ಮಕ್ಕಳ ಗಮನ ಅವಧಿ(Attention Span) ಹಾಗೂ ಅಡ್ಡಪರಿಣಾಮಗಳನ್ನ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಶಿಕ್ಷಣ ಸಚಿವರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ತಾಕೀತು ಮಾಡಿದ್ದಾರೆ.

ಅನಗತ್ಯವಿದ್ದರೂ ದಿನವಿಡೀ ಆನ್​ಲೈನ್ ತರಗತಿ ನೀಡುತ್ತಿರುವ ಕ್ರಮಗಳಿಗೆ ಕಡಿವಾಣ ಹಾಕಲು ಕೂಡಲೇ ಸುತ್ತೋಲೆ ಹೊರಡಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಚಿವರು ಸೂಚಿಸಿದ್ಧಾರೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ