Breaking News

ಹಣ್ಣು, ತರಕಾರಿ ಬೆಳೆಗಾರರಿಗೆ 15 ಸಾವಿರ ರೂ.- ಬಿಎಸ್‍ವೈಯಿಂದ ಮತ್ತೆ 162 ಕೋಟಿ ಪ್ಯಾಕೇಜ್ ಪ್ರಕಟ

Spread the love

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ತರಕಾರಿ, ಹಣ್ಣು ಬೆಳೆಗಾರರು ಹಾಗೂ ಕೈಮಗ್ಗ ಕಾರ್ಮಿಕರಿಗಾಗಿ ಒಟ್ಟು 162 ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದ್ದಾರೆ.

ತರಕಾರಿ, ಹಣ್ಣು ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 15 ಸಾವಿರ ರೂಪಾಯಿನಂತೆ ಒಟ್ಟು 137 ಕೋಟಿ ರೂ. ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಇದು 7 ಬಗೆಯ ಹಣ್ಣುಗಳು, 10 ತರಕಾರಿ ಬೆಳೆಗಳಿಗೆ ಸಿಮೀತವಾಗಿದೆ.

ಬಾಳೆ, ಪಪ್ಪಾಯ, ಟೇಬಲ್ ದ್ರಾಕ್ಷಿ, ಅಂಜೂರಾ, ಅನಾನಸ್, ಕಲ್ಲಂಗಡಿ/ ಕರ್ಜೂರಾ, ಬೋರೆ/ ಬೆಣ್ಣೆ ಹಣ್ಣು, 10 ತರಕಾರಿ ಬೆಳೆಗಳಾದ ಟೊಮ್ಯಾಟೊ, ಹಸಿರು ಮೆಣಸಿನಕಾಯಿ, ಹೂ ಕೋಸು, ಎಲೆ ಕೋಸು, ಸಿಹಿ ಕುಂಬಳಕಾಯಿ, ಬೂದು ಕುಂಬಳಕಾಯಿ, ಕ್ಯಾರೆಟ್, ಈರುಳ್ಳಿ, ದಪ್ಪ ಮೆಣಸಿನಕಾಯಿ, ಸೊಪ್ಪುಗಳು/ಹೀರೇಕಾಯಿ ಹಾಗೂ ತೊಂಡೆ ಕಾಯಿಗೆ ಪ್ರತಿ ಹೆಕ್ಟೇರ್‌ಗೆ 15 ಸಾವಿರ ರೂ. ನೀಡಲಾಗುತ್ತದೆ.

ಇತ್ತ 1.62 ಲಕ್ಷ ವಿದ್ಯುತ್ ವಿದ್ಯುತ್ ಚಾಲಿತ ಕೈಮಗ್ಗ, ಹ್ಯಾಂಡ್‍ಲೂಮ್ ಘಟಕಗಳ ಕಾರ್ಮಿಕರ ಸಹಾಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ಇಲ್ಲಿ ಕೆಲಸ ಮಾಡು ಪ್ರತಿ ಕಾರ್ಮಿಕರಿಗೆ 2 ಸಾವಿರ ರೂ.ನಂತೆ ಒಟ್ಟು 25 ಕೋಟಿ ರೂ. ನೀಡಲು ನಿರ್ಧರಿಸಿದೆ.

ಈ ಹಿಂದೆ ಸಿಎಂ ಯಡಿಯೂರಪ್ಪ ಅವರು, ರಾಜ್ಯದಲ್ಲಿ 11,687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಹೂವು ಮಾರಾಟವಾಗದೆ ರೈತರಿಗೆ ನಷ್ಟವಾಗಿದೆ. ಹೀಗಾಗಿ ಹೂ ಬೆಳೆಗಾರರಿಗೆ ಒಂದು ಹೆಕ್ಟೇರ್‌ಗೆ 25 ಸಾವಿರ ರೂ.ನಂತೆ ಪರಿಹಾರ ಹಣ ನೀಡಲಿದೆ. ರೈತರು ಎಷ್ಟೇ ಹೆಕ್ಟೇರ್ ಗಳಲ್ಲಿ ಹೂ ಬೆಳೆದಿದ್ದರೂ ಸರ್ಕಾರ ಪರಿಹಾರ ನೀಡುವುದು ಒಂದು ಹೆಕ್ಟೇರ್‍ಗೆ ಮಾತ್ರ ಎಂದು ಹೇಳಿದ್ದರು.

ಈ ಬೆನ್ನಲ್ಲೇ ತರಕಾರಿ ಹಾಗೂ ಹಣ್ಣಿನ ಬೆಳೆಗೂ ಪರಿಹಾರ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಹೀಗಾಗಿ ಸದ್ಯ ಸಿಎಂ 50,083 ಹೆಕ್ಟೇರ್ ಗಳಲ್ಲಿ ಬೆಳೆದ ತರಕಾರಿ ಹಾಗೂ 41,054 ಹೆಕ್ಟೇರ್ ಗಳಲ್ಲಿ ಬೆಳೆದ ಹಣ್ಣು ಬೆಳೆಗಾಗರಿಗೆ ಪ್ರತಿ ಹೆಕ್ಟೇರ್ ನಂತೆ 15 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ರಾಜ್ಯ ಸಕಾರವು ಈ ಹಿಂದೆ 1,610 ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿತ್ತು. ಈಗ 162 ಕೋಟಿ ರೂ. ಪ್ಯಾಕೇಜ್ ಪ್ರಕಟಿಸುವ ಮೂಲಕ ಒಟ್ಟು 1,772 ಕೋಟಿ ರೂ.ಗೆ ಹೆಚ್ಚಳವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ