Breaking News

ರಾಜ್ಯದಲ್ಲಿ ಇಂದು 196 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ

Spread the love

ಬೆಂಗಳೂರು – ರಾಜ್ಯದಲ್ಲಿ ಇಂದು 196 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಸ್ವಲ್ಪ ಹೊತ್ತಿನ ಮೊದಲು ಸಚಿವ ಸುರೇಶ ಕುಮಾರ 130 ಜನರಿಗೆ ಇಂದು ಸೋಂಕು ತಗುಲಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಆದರೆ ಅದು ತಪ್ಪು ಮಾಹಿತಿ ಎನ್ನುವುದು ದೃಢವಾಗಿದ್ದು, ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 196 ಜನರಿಗೆ ಸೋಂಕು ಪತ್ತೆಯಾಗಿದೆ. ಇಂದು ಈವರೆಗಿನ ದಾಖಲೆಯಾಗಿದೆ.

ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1939 ಆಗಿದೆ. ಬೆಳಗಾವಿಯಲ್ಲಿ ಇಂದು ಒಂದು ಕೇಸ್ ಪತ್ತೆಯಾಗಿದ್ದು, ಗದಗ, ರಾಯಚೂರು, ಯಾದಗಿರಿ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಕೊರೋನಾ ಸ್ಫೋಟವಾಗಿದೆ.

ಯಾದಗಿರಿಯಲ್ಲಿ 75 ಜನರಿಗೆ ಸೋಂಕು ಪತ್ತೆಯಾಗಿದೆ. ಉತ್ತರ ಕನ್ನಡದಲ್ಲಿ ಇಬ್ಬರಿಗೆ ಸೋಂಕು ದೃಢವಾಗಿದೆ. ಮಂಡ್ಯದಲ್ಲಿ 28, ಗದಗದಲ್ಲಿ 15, ಚಿಕ್ಕ ಬಳ್ಳಾಪುರದಲ್ಲಿ 20, ಬೆಂಗಳೂರಲ್ಲಿ 4 ಜನರಿಗೆ ಸೋಂಕು ತಗುಲಿದೆ.

ಬೆಳಗಾವಿ ಮತ್ತು ಉತ್ತರ ಕನ್ನಡದಲ್ಲಿ ಪತ್ತೆಯಾಗಿರುವ ಸೋಂಕಿತರು ಮಹಾರಾಷ್ಟ್ರದಿಂದ ಹಿಂದಿರುಗಿರುವವರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ