Breaking News

ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಿದ್ದ ಹೋಟೆಲ್ ತೆರೆಯುವಂತೆ ಸರ್ಕಾರ ಸೂಚನೆ

Spread the love

ಬೆಂಗಳೂರು: ಕೊರೊನಾ ವೈರಸ್ ನಿಂದ ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಿದ್ದ ಹೋಟೆಲ್ ತೆರೆಯುವಂತೆ ಸರ್ಕಾರ ಸೂಚನೆ ನೀಡಿದೆ.

ಕೊರೊನಾ ಭೀತಿಯಿಂದ ಹೋಟೆಲ್‍ಗಳು ಮುಚ್ಚಿದ್ದವು. ಆದರೆ ಇದರ ನಡುವೆ ಪಾರ್ಸೆಲ್ ನೀಡುವುದಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಈಗ ಹಂತ ಹಂತವಾಗಿ ಲಾಕ್‍ಡೌನ್ ಅನ್ನು ಸಡಿಲಿಕೆ ಮಾಡುತ್ತಿದ್ದು, ಹೋಟೆಲ್ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಜೊತೆಗೆ ಕೆಲ ಮಾರ್ಗ ಸೂಚಿಯನ್ನು ಸೂಚಿಸಲಾಗಿದೆ

ಮಾರ್ಗಸೂಚಿ ಏನು?
ಹೋಟೆಲ್‍ಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಸರಿಯಾದ ವ್ಯವಸ್ಥೆ ಮಾಡಬೇಕು ಹಾಗೂ ಹೋಟೆಲ್‍ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳವುದು ಕಡ್ಡಾಯವಾಗಿರುತ್ತದೆ. ಪ್ರತ್ಯೇಕ ಆಗಮನ ಮತ್ತು ನಿರ್ಗಮನ ಇರಬೇಕು. ಹೋಟೆಲ್ ರಿಸೆಪ್ಷನ್‍ನಲ್ಲಿ ಗೆಸ್ಟ್‍ಗಳು ಐ.ಡಿ. ಕಾರ್ಡ್, ಟ್ರಾವೆಲ್ ಹಿಸ್ಟರಿಯನ್ನು ಕಡ್ಡಾಯವಾಗಿ ನೀಡಬೇಕು. ಸಂಪರ್ಕ ರಹಿತ ಪ್ರಕ್ರಿಯೆ ಅಂದರೆ ಕ್ಯೂ ಆರ್ ಕೋಡ್ ಅನ್ನು ಹೋಟೆಲ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಮಾರ್ಗಸೂಚಿ ಏನು?
ಹೋಟೆಲ್‍ಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಸರಿಯಾದ ವ್ಯವಸ್ಥೆ ಮಾಡಬೇಕು ಹಾಗೂ ಹೋಟೆಲ್‍ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳವುದು ಕಡ್ಡಾಯವಾಗಿರುತ್ತದೆ. ಪ್ರತ್ಯೇಕ ಆಗಮನ ಮತ್ತು ನಿರ್ಗಮನ ಇರಬೇಕು. ಹೋಟೆಲ್ ರಿಸೆಪ್ಷನ್‍ನಲ್ಲಿ ಗೆಸ್ಟ್‍ಗಳು ಐ.ಡಿ. ಕಾರ್ಡ್, ಟ್ರಾವೆಲ್ ಹಿಸ್ಟರಿಯನ್ನು ಕಡ್ಡಾಯವಾಗಿ ನೀಡಬೇಕು. ಸಂಪರ್ಕ ರಹಿತ ಪ್ರಕ್ರಿಯೆ ಅಂದರೆ ಕ್ಯೂ ಆರ್ ಕೋಡ್ ಅನ್ನು ಹೋಟೆಲ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.


Spread the love

About Laxminews 24x7

Check Also

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Spread the loveಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ