Breaking News

ಬೆಂಗಳೂರು:ಲಾಕ್‍ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಟ್ರಾಫಿಕ್ ಜಾಮ್ …….

Spread the love

ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಲಾಕ್‍ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಜನರ ಓಡಾಟ ಹೆಚ್ಚಾಗಿದೆ. ಜೊತೆಗೆ ಓಡಾಡುವ ವಾಹನಗಳ ಸಂಖ್ಯೆ ಹೆಚ್ಚಳವಾಗಿದ್ದು, ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.

ಸರ್ಕಾರಿ ಕಚೇರಿ, ಐಟಿ-ಬಿಟಿ, ಗೂಡ್ಸ್ ಸರ್ವೀಸ್, ಕೃಷಿ ಚಟುವಟಿಕೆ, ಎಪಿಎಂಸಿ ಮತ್ತು ಇನ್ನಿತರ ತುರ್ತು ಸೇವೆಗಳಿಗೆ ರಾಜ್ಯ ಸರ್ಕಾರ ವಿನಾಯಿತಿ ನೀಡಿದೆ. ಇದರಿಂದ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಜಾಸ್ತಿ ಆಗಿದ್ದು, ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಸುಮಾರು ಅರ್ಧ ಕಿಲೋ ಮೀಟರ್ ವರೆಗೆ ಬೈಕ್ ಮತ್ತು ಕಾರುಗಳು ನಿಂತಿವೆ.

ಹೆಬ್ಬಾಳದ ಕೊಡಿಗೇಹಳ್ಳಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ಪೊಲೀಸರು ಪ್ರತಿಯೊಂದು ವಾಹನದ ಪಾಸ್ ಚೆಕ್ ಮಾಡಿ ಬಿಡುತ್ತಿದ್ದಾರೆ. ಹೀಗಾಗಿ ಪಾಸ್ ಚೆಕ್ ಮಾಡುವ ಸಂದರ್ಭದಲ್ಲಿ ವಾಹನಗಳು ಸಾಲು ಸಾಲಾಗಿ ನಿಂತುಕೊಳ್ಳುತ್ತಿವೆ. ಈ ಮಧ್ಯೆ ಅನಗತ್ಯವಾಗಿ ಓಡಾಡುವ ವಾಹಗಳನ್ನು ಪೊಲೀಸರು ಸೀಜ್ ಮಾಡುತ್ತಿದ್ದಾರೆ.

ಇನ್ನೂ ಕೆ.ಆರ್.ಸರ್ಕಲ್‍ನಲ್ಲಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದು, ಪಾಸ್ ಇಲ್ಲದೆ ಇರುವ ವಾಹನಗಳನ್ನ ಸೀಜ್ ಮಾಡುತ್ತಿದ್ದಾರೆ. ಕೆಲಸಕ್ಕೆ ತೆರಳುತ್ತಿರುವ ಸಿಬ್ಬಂದಿಯ ಐಡಿ ಕಾರ್ಡ್ ಚೆಕ್ ಮಾಡಿ ಬಿಡಲಾಗುತ್ತಿದೆ. ಅಲ್ಲದೇ ಕಾವೇರಿ ಜಂಕ್ಷನ್, ಎಲೆಕ್ಟ್ರಾನಿಕ್ ಸಿಟಿ ಮತ್ತು ಟೌನ್‍ಹಾಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ