Breaking News

ಬಳ್ಳಾರಿ: ಮಾಹಾ ಮಾರಿ ಕೊರೊನಾ ವಿರುದ್ಧ ಹೋರಾಡಲು ಗಣಿ ನಾಡು ಬಳ್ಳಾರಿಯ ಗಣಿ ಕಂಪನಿಗಳು ಸಹ ಸಾತ್

Spread the love

ಬಳ್ಳಾರಿ: ಮಾಹಾ ಮಾರಿ ಕೊರೊನಾ ವಿರುದ್ಧ ಹೋರಾಡಲು ಗಣಿ ನಾಡು ಬಳ್ಳಾರಿಯ ಗಣಿ ಕಂಪನಿಗಳು ಸಹ ಸಾತ್ ನೀಡಿವೆ. ಬಳ್ಳಾರಿ ನಗರದ ಸುತ್ತ ಸ್ಯಾನಿಟೈಜರ್ ಸಿಂಪಡಣೆ ಮಾಡುವ ಮೂಲಕ ತಮ್ಮದೇ ಆದ ಸಹಾಯ ಮಾಡಿವೆ.

ಲಾಕ್‍ಡೌನ್ ಸಮಯದಲ್ಲಿ ಜಿಲ್ಲೆಯ ಕೈಗಾರಿಕೆಗಳು ಸಹಾಯ ಮಾಡಬೇಕೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕಲು ಕೇಳಿದ್ದರು. ಹೀಗಾಗಿ ಬಳ್ಳಾರಿಯ ಎನ್‍ಎಮ್‍ಡಿಸಿ ಕಂಪನಿ ಜಿಲ್ಲಾಡಳಿತಕ್ಕೆ ಸಾತ್ ನೀಡಿದ್ದು, ಕಂಪನಿ ವತಿಯಿಂದ ನಗರದ ನೈರ್ಮಲ್ಯೀಕರಣ ಕೈಗೊಳ್ಳಲು ಮುಂದಾಗಿದೆ.

ನಗರದ ಜನ ನಿಬಿಡ ಪ್ರದೇಶಗಳಲ್ಲಿ ಸಾನಿಟೈಜರ್ ಸಿಂಪಡಣೆ ಮಾಡಿದೆ. ಜೊತೆಗೆ ನಗರದ ಪ್ರಮುಖ 19 ಪ್ರದೇಶವನ್ನು ಜಿಲ್ಲಾಡಳಿತ ಗುರುತಿಸಿದ್ದು, ಎಲ್ಲಿ ಎನ್‍ಎಮ್‍ಡಿಸಿ ವತಿಯಿಂದ ಸಾನಿಟೈಜರ್ ಸಿಂಪಡಣೆ ಮಾಡಲಾಗಿದೆ ಎಂಬುದನ್ನು ಗುರುತಿಸಲಾಗಿದೆ. ಬಳ್ಳಾರಿ, ಸಂಡೂರು ಅಕ್ಕಪಕ್ಕದ ಗ್ರಾಮಗಳಲ್ಲಿಯೂ ಕಂಪನಿ ಸ್ಯಾನಿಟೈಜರ್ ಸಿಂಪಡಣೆ ಮಾಡಿದೆ.


Spread the love

About Laxminews 24x7

Check Also

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Spread the loveದೆಹಲಿ: ಪರಿಶಿಷ್ಟ ಜಾತಿ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್‌  ಇಂದು (ಮಂಗಳವಾರ) ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಹಿಂದೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ