ಚಿಕ್ಕಬಳ್ಳಾಪುರ: ಸ್ವಿಫ್ಟ್ ಕಾರಿಗೆ ಬಿಎಂಡಬ್ಲೂ ಆರ್ಆರ್ ಬೈಕ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಯುವಕ ಸಾವನ್ನಪ್ಪಿದ ಘಟನೆ ದೇವನಹಳ್ಳಿ ತಾಲೂಕು ಚಿಕ್ಕಸಣ್ಣೆ ಗೇಟ್ ಸಿಗ್ನಲ್ ಬಳಿ ನಡೆದಿದೆ.
ದೇವನಹಳ್ಳಿ ತಾಲೂಕಿನ ನರಗನಹಳ್ಳಿ ಗ್ರಾಮದ ನಿವಾಸಿ ನವೀನ್ ಕುಮಾರ್ (25) ಸಾವನ್ನಪ್ಪಿದ ಯುವಕ. ಬಿಎಂಡಬ್ಲೂ ಆರ್ಆರ್ ಬೈಕ್ ಸವಾರ ರಾಕೇಶ್, ಅಪಘಾತದ ಬಳಿಕ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ದೇವನಹಳ್ಳಿ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
Laxmi News 24×7