ಬಸವಕಲ್ಯಾಣ : ದಿವಂಗತ ಶಾಸಕ ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಜೆ ಜಾರಿದ ಪ್ರಸಂಗ ನಡೆದಿದೆ.
ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಿಂತು ಮಾತನಾಡುವಾಗ ಪಂಜೆ ಸಡಿಲಗೊಂಡು ಬೀಳುವ ಹಂತದಲ್ಲಿತ್ತು. ಅದನ್ನು ಗಮನಿಸಿದ ನಗರ ಠಾಣೆ ಪಿಎಸ್ ಐ ಗುರುಪಾಟೀಲ್ ಅವರು ವೇದಿಕೆಗೆ ಆಗಮಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಮತ್ತು ಹಮನಾಬಾದ ಶಾಸಕ ರಾಜಶೇಖರ್ ಪಾಟೀಲ್ ಗೆ ವಿಷಯ ತಿಳಿಸಿದರು.
ಈ ವೇಳೆ ಶಾಸಕ ರಾಜಶೇಖರ್ ಪಾಟೀಲ್ ಸಿದ್ದರಾಮಯ್ಯ ಬಳಿ ಆಗಮಿಸಿ ಪಂಚೆ ಸಡಿಲಗೊಂಡಿರುವುದನ್ನು ಗಮನಕ್ಕೆ ತಂದರು. ನಂತರ ಸಿದ್ದರಾಮಯ್ಯ ಪಂಚೆಯನ್ನು ಕಟ್ಟಿಕೊಂಡರು. ಈ ವೇಳೆ ಸಿದ್ದರಾಮಯ್ಯ ಪಂಜೆ ಕಟ್ಟಿಕೊಳ್ಳುತ್ತಲೇ ಹೊಟ್ಟೆಗೆ ಹಸಿವಾಗಿದೆ ಅಂತಾ ಕಾಣಿಸುತ್ತಿದೆ.
ಅದಕ್ಕಾಗಿಯೇ ಲುಂಗಿ ಸಡಿಲಗೊಂಡಿದೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News