ಬೆಳಗಾವಿ: ಕೊರೊನಾ ಸೋಂಕಿತರ ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಸೋಂಕಿನ ಭಯ ಮೆರತು ಸ್ಮಶಾನದೊಳಗೆ ನುಗ್ಗಿದ ಘಟನೆ ಜಿಲ್ಲೆಯ ಸದಾಶಿವನಗರದ ಸ್ಮಶಾನದಲ್ಲಿ ನಡೆದಿದೆ.

ನಿನ್ನೆ ಸಂಜೆ ನಗರ ಪಾಲಿಕೆ ಸಿಬ್ಬಂದಿ ಕೊರೊನಾ ಸೋಂಕಿತರೊಬ್ಬರ ಅಂತ್ಯಕ್ರಿಯೆ ನಡೆಸಲು ಸದಾಶಿವನಗರದ ಸ್ಮಶಾನಕ್ಕೆ ಮೃತದೇಹ ತಂದಿದ್ದಾರೆ. ಈ ವೇಳೆ ಸೋಂಕಿತರ ಸಂಬಂಧಿಕರು ಪಿಪಿಇ ಕಿಟ್ ಇಲ್ಲದೇ, ಶವದ ಅಕ್ಕಪಕ್ಕ ಓಡಾಡಿದ್ದಾರೆ. ಅಲ್ಲದೇ ಅಂತ್ಯಸಂಸ್ಕಾರದ ವೇಳೆ ಬೆಂಕಿ ಸರಿಪಡಿಸಲು ಪಾಲಿಕೆ ಸಿಬ್ಬಂದಿ ಕೂಡ ಪಿಪಿಇ ಕಿಟ್ ಇಲ್ಲದೇ ತಿರುಗಾಡಿದ್ದಾರೆ. ಗುಂಪು ಗುಂಪಾಗಿ ಸೇರಿದ ಸಂಬಂಧಿಗಳು ಕೂಗಳತೆ ದೂರದಲ್ಲಿ ನಿಂತು ಅಂತ್ಯಕ್ರಯೆ ವೀಕ್ಷಿಸಿದ್ದಾರೆ.
Laxmi News 24×7