Breaking News

ಕರಾವಳಿಯಲ್ಲಿ ಉತ್ತಮ ಮಳೆ

Spread the love

ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಶನಿವಾರ ಉತ್ತಮ ಮಳೆಯಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ, ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟಾರೆ 5 ಸೆಂ.ಮೀ. ದಾಖಲಾಗಿದೆ. ಹವಾಮಾನ ಇಲಾಖೆಯು ಸಮುದ್ರದಲ್ಲಿ ಗಾಳಿ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಸಿದೆ.

ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.

ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. ಬೆಳಗಾವಿ ನಗರ, ಹಿರೇಬಾಗೇವಾಡಿ, ಗೋಕಾಕ, ರಾಯಬಾಗದಲ್ಲಿ ಸಾಧಾರಣ ಮಳೆಯಾಗಿದೆ.

ಧಾರವಾಡ ನಗರದ ಟೋಲ್‌ನಾಕಾ ಬಳಿ ರಸ್ತೆ ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಜಿಲ್ಲೆಯ ಕಲಘಟಗಿ, ಅಳ್ನಾವರ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆಯ ವಿವಿಧೆಡೆ ಶನಿವಾರ ಮಧ್ಯಾಹ್ನದ ಬಳಿಕ ಸಾಧಾರಣ ಮಳೆಯಾಗಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ