Breaking News

ಸಿದ್ದರಾಮಯ್ಯನವರೇ, ನೀವು ಮಾಡಿದ್ದು ತಪ್ಪು ಅಂತ ಈಗ ಗೊತ್ತಾಯ್ತಾ..?

Spread the love

ಬೆಂಗಳೂರು,ಆ.12- ಎಸ್‍ಡಿಪಿಐ ಮತ್ತು ಕೆಐಎಫ್‍ಡಿ 1600 ಪುಂಡರ ವಿರುದ್ಧ ಇದ್ದ 175 ಕ್ರಿಮಿನಲ್ ಕೇಸುಗಳನ್ನು ನೀವು 2015ರಲ್ಲಿ ವಾಪಸ್ಸು ತೆಗೆದುಕೊಂಡಿದ್ದು ತಪ್ಪು ಅಂತ ನಿಮಗೆ ಈಗಲಾದರೂ ಅನ್ನಿಸುತ್ತಿದೆಯೇ ಸಿದ್ದರಾಮಯ್ಯನವರೇ?

ಇಷ್ಟಾಗಿಯೂ ಪುಂಡ ಮುಸಲ್ಮಾನರನ್ನು ಖಂಡಿಸಲು ಏಕೆ ನಿಮಗೆ ಮನಸ್ಸು ಬರುತ್ತಿಲ್ಲ ಸಾರ್? ಎಂದು ಮೈಸೂರು-ಕೊಡುಗು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವೀಟ್‍ನಲ್ಲಿ ಕಂದಾಯ ಸಚಿವ ಆರ್. ಅಶೋಕ್, ಶಾಂತಿಯಿಂದ ಬದುಕೋಣ ಎಂಬುದು ನಮ್ಮ ಆಶಯ. ಅಶಾಂತಿಯೇ ಕೆಲವರ ರಾಜಮಾರ್ಗ ಎಂದಾದರೆ, ಆ ಮಾರ್ಗವನ್ನೇ ಬದಲಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಪೊಲೀಸ್ ವ್ಯವಸ್ಥೆ ಸದೃಡವಾಗಿದೆ ಎಂದು ಅವರು ಹೇಳಿದ್ದಾರೆ.

ನಿನ್ನೆ ರಾತ್ರಿ ಗಲಭೆ ನಡೆದ ಜಾಗದಲ್ಲಿ ಅಲ್ಲಿನ ಸ್ಥಳೀಯರು ಕಾರ್ಯವಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ದಿಶೆಯಲ್ಲೂ ಸರ್ಕಾರ ತನಿಖೆ ಮಾಡಲಿದೆ ಎಂದು ಟ್ವೀಟ್‍ನಲ್ಲಿ ಹೇಳಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ