ಬೆಂಗಳೂರು: ಗಲಭೆ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲು ‘ಕ್ಲೇಮ್ ಕಮಿಷನರ್’ ನೇಮಿಸುವಂತೆ ರಾಜ್ಯ ಸರ್ಕಾರದ ಪರ ಹೈಕೋರ್ಟ್ಗೆ ಅರ್ಜಿ ಸಲ್ಲಿಸುವ ಜವಾಬ್ದಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್) ನೀಡಲಾಗಿದೆ.
ಈ ಸಂಬಂಧ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ.
ಹೈಕೋರ್ಟ್ ನೇಮಿಸುವ ‘ಕ್ಲೇಮ್ ಕಮಿಷನರ್’ ಗಲಭೆ ವೇಳೆ ನಷ್ಟವಾದ ಆಸ್ತಿಯ ಮೌಲ್ಯ ಲೆಕ್ಕ ಹಾಕಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ನಿರ್ಧರಿಸಲಿದ್ದಾರೆ. ದಾವೆ ನಡೆಸುವ ಮತ್ತು ಅಫಿಡವಿಟ್ಗೆ ಸಹಿ ಹಾಕುವ ಅಧಿಕಾರವನ್ನು ಎಡಿಜಿಪಿಗೆ ನೀಡಲಾಗಿದೆ.
Laxmi News 24×7