Breaking News
Home / new delhi / 100 ಪಡಿತರ ಚೀಟಿ ಹೊಂದಿರುವ ತಾಂಡಗಳಿಗೊಂದು ನ್ಯಾಯಬೆಲೆ ಅಂಗಡಿ ಸ್ಥಾಪನೆ

100 ಪಡಿತರ ಚೀಟಿ ಹೊಂದಿರುವ ತಾಂಡಗಳಿಗೊಂದು ನ್ಯಾಯಬೆಲೆ ಅಂಗಡಿ ಸ್ಥಾಪನೆ

Spread the love

ಬೆಂಗಳೂರು. ರಾಜ್ಯದಲ್ಲಿ 100ಕ್ಕೂ ಹೆಚ್ಚು ಪಡಿತರ ಚೀಟಿ ಹೊಂದಿರುವ ಎಲ್ಲಾ ತಾಂಡಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನದ 3 ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 3300 ತಾಂಡಗಳಿದ್ದು, ಲಂಬಾಣಿ ಸಮುದಾಯವು ತಾಂಡಗಳಲ್ಲಿರುವುದರಿಂದ ಪಡಿತರವನ್ನು ಪಡೆಯಲು ಒಂದು ದಿನ ಕೆಲಸವನ್ನು ಬಿಟ್ಟು ಬರಬೇಕಾಗುತ್ತದೆ. 100 ಪಡಿತರ ಚೀಟಿ ಹೊಂದಿರುವ ಎಲ್ಲಾ ತಾಂಡಗಳಲ್ಲಿ ನ್ಯಾಯಬೆಲೆ ಅಂಗಡಿ ಸ್ಥಾಪಿಸಿ, ಲಂಬಾಣಿ ಸಮುದಾಯದವರಿಗೆ ನೀಡಲಾಗುವುದು.

ಈ ಹಿಂದೆ ತಾವು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದ ಅವಧಿಯಲ್ಲಿ ಅನೇಕ ಸೌಲಭ್ಯಗಳನ್ನು ಕಲ್ಪಿಸಲು ಆದೇಶ ಹೊರಡಿಸಲಾಗಿತ್ತು. ವಿದ್ಯುತ್ ಸಂಪರ್ಕ ಹೊಂದಿಲ್ಲ ತಾಂಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಅರ್ಹ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸಹ ಕ್ರಮಕೈಗೊಳ್ಳಲಾಗುವುದು.

ಈ ಕುರಿತು ಪ್ರಸ್ತಾವನೆಗಳನ್ನು ಸಿದ್ದಪಡಿಸಿ ಶೀಘ್ರವಾಗಿ ಸಲ್ಲಿಸುವಂತೆ ತಾಂಡ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಹೊರರಾಜ್ಯಗಳಿಗೆ ವಲಸೆ ಹೋದವರು ಮರಳಿ ಅವರ ತಾಂಡಗಳಿಗೆ ಬಂದಿರುವುದರಿಂದ ಅವರಿಗೆ ಕೂಡಲೇ ಜೀವನ ನಿರ್ವಹಣೆಗೆ ಕೆಲಸ ದೊರಕಬೇಕಿದೆ.

ಈ ಹಿನ್ನೆಲೆಯಲ್ಲಿ ತಾಂಡ ಅಭಿವೃದ್ದಿ ನಿಗಮವು ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಬೇಕು. ಶೋಷಿತರ, ಬಡವರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು. ಲಂಬಾಣಿ ಸಮುದಾಯದ ಏಳಿಗೆಗೆ ಶ್ರಮಿಸಲಾಗುವುದು. ಪ್ರತಿಷ್ಠಾನದ ಎಲ್ಲಾ ಸದಸ್ಯರು, ಅಧಿಕಾರಿಗಳು ಸಮುದಾಯದ ಕಲ್ಯಾಣಕ್ಕಾಗಿ ಶ್ರಮಿಸಬೇಕು ಎಂದು ತಿಳಿಸಿದರು.

ಸಂತಸೇವಾಲಾಲ್ ಅವರ ಜನ್ಮಸ್ಥಳವಾದ ಸೂರಗೊಂಡನಕೊಪ್ಪದ ಮಹಾಮಠದ ಸಂತಸೇವಾಲಾಲ್ ಕಾರ್ಯಕ್ಷೇತ್ರ ಮತ್ತು ಬೋಧನ ಸ್ಥಳಗಳ ಅಭಿವೃದ್ಧಿ, ನಿರ್ವಹಣೆ, ಯಾತ್ರಾರ್ಥಿಗಳಿಗೆ ಮತ್ತು ಪ್ರವಾಸಿಗರಿಗೆ ಯಾತ್ರಿನಿವಾಸ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೆ ಅನೇಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಶ್ರೀ ಕ್ಷೇತ್ರದ ಸುತ್ತಮುತ್ತಲಿನ ಕೆರೆಗಳ ಅಭಿವೃದ್ದಿ, ಮಹಾಮಠಕ್ಕೆ ಹೊಂದಿಕೊಂಡಿರುವ ಅರಣ್ಯವನ್ನು ಪರಿಸರ ಪ್ರವಾಸೋದ್ಯಮವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಮಧ್ಯವ್ಯಸನಿಗಿಗಳಿಗೆ ಮಧ್ಯಪಾನ ಮುಕ್ತಗೊಳಿಸಲು ಒಂದು ಕೋಟಿ ರೂ. ವೆಚ್ಚದಲ್ಲಿ ಮಧ್ಯವರ್ಜನ ಕೇಂದ್ರ ( ಡಿಅಡಿಕ್ಷನ್ ಸೆಂಟರ್) ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ.

ಈ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಹಾಗೂ ಗುಣಮಟ್ಟದಲ್ಲಿ ಪೂರ್ಣಗೊಳಿಸಿ, ಸದ್ಬಳಕೆಯಾಗುವಂತೆ ಕ್ರಮಕೈಗೊಳ್ಳುವಂತೆ ಡಿಸಿಎಂ ಸೂಚಿಸಿದರು.

ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ತಾಂಡ ಅಭಿವೃದ್ಧಿ ನಿಮಗ ಹಾಗೂ ಈ ಪ್ರತಿಷ್ಠಾನದ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ರವಿಕುಮಾರ್ ಸುರಪುರ್, ಪ್ರತಿಷ್ಠಾನದ ಸದಸ್ಯರು, ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಮ್ಮದು ಮೊಘಲ್ ಸರ್ಕಾರವಲ್ಲ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್‌ ಚಾಟಿ

Spread the love ಬೆಂಗಳೂರು: ‘ನಮ್ಮದು ಜನರ ಕಲ್ಯಾಣಕ್ಕಾಗಿ ಶ್ರಮಿಸುವ ಆಡಳಿತ ವ್ಯವಸ್ಥೆ ಎಂಬುದನ್ನು ಮರೆಯಬೇಡಿ. ಇದು ಮೊಘಲರ ಸರ್ಕಾರವಲ್ಲ’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ