Breaking News

ನಾಡಹಬ್ಬ ದಸರಾ ಆಚರಣೆಗೆ ಹೆಚ್ಚಿದ ಒತ್ತಡ: ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸಭೆ

Spread the love

ಬೆಂಗಳೂರು: ಕರೊನಾ ಸಾಂಕ್ರಾಮಿಕ ರೋಗದ ಕಾರಣ ಮುಂದಿಟ್ಟು ನಾಡಹಬ್ಬ ಮೈಸೂರು ದಸರಾ ಆಚರಣೆ ಕೈಬಿಡಬಾರದು ಎಂಬ ಒತ್ತಡ ಹೆಚ್ಚುತ್ತಿದೆ. ಮೈಸೂರು ದಸರಾ ನಡೆಯುವುದೇ ಇಲ್ಲವೇ ಎಂಬ ಸಂದೇಹ ಹೆಚ್ಚಾದ ಕಾರಣ ಈ ಒತ್ತಡ ಹೆಚ್ಚಾಗಿದೆ.

ಈ ನಡುವೆ, ಕಳೆದ ತಿಂಗಳು ಕಾವೇರಿ ನದಿಗೆ ಬಾಗಿನ ಸಮರ್ಪಿಸಲು ತೆರಳುವ ಸಂದರ್ಭದಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಸರಾ ಆಚರಣೆ ಬಗ್ಗೆ ತೀರ್ಮಾನಿಸಲು ಚಿಂತನೆ ನಡೆದಿದೆ. ಶೀಘ್ರವೇ ಸಭೆ ನಡೆಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೆ.7ರಂದು ಉನ್ನತಮಟ್ಟದ ಸಭೆ ನಿಗದಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಹಿರಿಯ ಅಧಿಕಾರಿಗಳು ಭಾಗವಹಿಸುವ ನಿರೀಕ್ಷೆ ಇದೆ. ಕರೊನಾ ಸಂಕಷ್ಟದ ನಡುವೆ ಸರಳ ದಸರಾ ಆಚರಣೆಯ ರೂಪರೇಷೆ, ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಅನುಷ್ಠಾನದ ಮಾರ್ಗೋಪಾಯಗಳ ಕುರಿತು ಈ ಸಭೆಯಲ್ಲಿ ಚರ್ಚೆಯಾಗಲಿವೆ.

 


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ