ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಈ ಬಾರಿ ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಸಚಿವ ಸಿ.ಟಿ. ರವಿ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ. ದಸರಾದಲ್ಲಿ ಜಂಬೂ ಸವಾರಿ ಇರಲ್ಲ, ಕೇವಲ ಅರಮನೆ ಒಳಗಡೆ ಮಾತ್ರ ಜಂಬೂ ಸವಾರಿ ಇರಲಿದೆ ಎಂದರು.
ಇನ್ನು ಈ ಬಾರಿ ಮಕ್ಕಳ ದಸರಾ, ಮಹಿಳಾ ದಸರಾ , ಯುವದಸರಾ, ಕುಸ್ತಿ ಪಂದ್ಯಾವಳಿ, ಆಹಾರ ಮೇಳ , ಪಂಜಿನ ಕವಾಯತು ಕೂಡು ಇರುವುದಿಲ್ಲ ಎಂದು ತಿಳಿಸಿದರು.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??