Breaking News
Home / new delhi / ಸಿಎಂ ಭೇಟಿ ಮಾಡಿದ ಸ್ಯಾಂಡಲ್ವುಡ್ ‘ಲೀಡರ್’ ಶಿವಣ್ಣ ಅಂಡ್ ಟೀಮ್

ಸಿಎಂ ಭೇಟಿ ಮಾಡಿದ ಸ್ಯಾಂಡಲ್ವುಡ್ ‘ಲೀಡರ್’ ಶಿವಣ್ಣ ಅಂಡ್ ಟೀಮ್

Spread the love

ಬೆಂಗಳೂರು,   ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಮನವಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟ ಶಿವರಾಜ್ ಕುಮಾರ್ ನೇತೃತ್ವದ ತಂಡ ಸಲ್ಲಿಸಿತು.

ಕಳೆದ 6 ತಿಂಗಳಿನಿಂದ ಕೊರೊನಾದಿಂದ ತತ್ತರಿಸಿರುವ ಚಿತ್ರೋದ್ಯಮದ ಮಂದಿಗೆ ನೆರವು ನೀಡಲು ವಿಶೇಷ ಪ್ಯಾಕೇಜ್ ಅಗತ್ಯವಿದೆ. ಸರ್ಕಾರ ಇದನ್ನು ನೀಡುವಂತೆ ಕೊರಲಾಯಿತು. ಜೊತೆಗೆ ವಾರ್ಷಿಕ ತೆರಿಗೆ ಮನ್ನ ಮಾಡಬೇಕು. ಕೊರೊನಾ ಸಂದರ್ಭದಲ್ಲಿ ಚಿತ್ರಮಂದಿರಗಳ ಕರೆಂಟ್ ಬಿಲ್‍ನ್ನು ಮನ್ನ ಮಾಡುವುದು 2018 ಮತ್ತು 19ನೇ ಸಾಲಿನ ಚಿತ್ರಗಳ ಸಬ್ಸಿಡಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು.

ಈಗಾಗಲೇ ಹೆಸರಘಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಚಿತ್ರನಗರಿ ಬಗ್ಗೆ ಹೆಚ್ಚು ಅಸ್ತೆ ವಹಿಸಿ ರೂಪುರೇಷೆ ಸಿದ್ಧಪಡಿಸಿ ಆ ಯೋಜನೆಯನ್ನು ಜಾರಿಗೊಳಿಸುವಂತೆ ಮನವಿ ಮಾಡಿದರು. ಚಿತ್ರೋದ್ಯಮದಲ್ಲಿ ಇರುವ ನಿರ್ಮಾಪಕರು, ವಿತರಕರು, ಪ್ರದರ್ಶಕರು ಹಾಗೂ ಕಾರ್ಮಿಕರ ಒಕ್ಕೂಟ ಸೇರಿದಂತೆ ಇತರೇ ಅಂಗ ಸಂಸ್ಥೆಗಳೆಲ್ಲಕ್ಕೂ ಅನುಕೂಲ ಕಲ್ಪಿಸುವಂತೆ ಮನವಿ ಮಾಡಲಾಯಿತು.

ಕಳೆದ ಬಾರಿಯೂ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ಸಮಯ ನಿಗಧಿಯಾಗಿದ್ದರೂ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಇಂದು ಭೇಟಿ ಮಾಡಿದ ಚಿತ್ರೋದ್ಯಮದ ಮಂದಿ ಕೊರೊನಾ ಸಂದರ್ಭದಲ್ಲಿ ಅನುಭವಿಸಿರುವ ಸಂಕಷ್ಟಗಳ ನಿವಾರಣೆಗೆ ಒಂದು ವಿಶೇಷ ಪ್ಯಾಕೇಜ್ ಅಗತ್ಯವಿದೆ.

ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ನೆರವಿಗೆ ದಾವಿಸಬೇಕೆಂದು ಮನವಿ ಮಾಡಲಾಯಿತು. ಇದಕ್ಕೂ ಮುನ್ನ ಉದ್ಯಮದವರು ಚಿತ್ರೀಕರಣ ನಡೆಸಲು ಅನುಕೂಲ ಮಾಡಿಕೊಳ್ಳುವಂತೆ ಸಚಿವ ಸಿ.ಟಿ. ರವಿ ಹಾಗೂ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ರವರನ್ನು ಭೇಟಿ ಮಾಡಿದರು.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಒಂದು ವಾರದಲ್ಲಿ ಹಂತ ಹಂತವಾಗಿ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು. ಬೇಡಿಕೆಗಳನ್ನು ಪರಿಶೀಲಿಸಿ ಚಿತ್ರೋದ್ಯಮಕ್ಕೆ ಅಗತ್ಯವಿರುವ ನೆರವನ್ನು ಕಲ್ಪಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ಮಾಜಿ ಅಧ್ಯಕ್ಷ ಸ.ರಾ. ಗೋವಿಂದು, ಉಪಾಧ್ಯಕ್ಷ ಉಮೇಶ್ ಬಣಕಾರ್, ನಟಿ ತಾರಾ, ನಟರಾದ ಯಶ್, ದುನಿಯಾ ವಿಜಿ, ಸಾಧುಕೋಕಿಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ