Breaking News

ಹಗರಿಬೊಮ್ಮನಹಳ್ಳಿ: ಜೀವನದಲ್ಲಿ ಜಿಗುಪ್ಸೆ ವಿಷಸೇವಿಸಿ ಯುವಕ ಆತ್ಮಹತ್ಯೆ

Spread the love

ಹಗರಿಬೊಮ್ಮನಹಳ್ಳಿ  : ಯುವಕನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸೊನ್ನ ಗ್ರಾಮದ ನಿವಾಸಿ ಬಡಿಗೇರ್‌ ಸಿದ್ದೇಶ (22) ಎಂಬುವನೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.

 

ಮೃತ ಬಡಿಗೇರ್‌ ಸಿದ್ದೇಶ ಬಹುದಿನಗಳಿಂದ ಮೂರ್ಛೆ ರ್‍ರೋಗ ಮತ್ತು ಮೂಲವ್ಯಾಧಿ ಕಾಯಿಲೆಗಳಿಂದ ಬಳಲುತ್ತಿದ್ದು, ಇದರಿಂದ ಜಿಗುಪ್ಸೆ ಹೊಂದಿದ್ದನೆಂದು ಎಂದು ಹೇಳಲಾಗುತ್ತಿದೆ. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ವಿಷ ಸೇವಿಸಿದ್ದಾನೆ.

ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ!

ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಚಿಕಿತ್ಸೆ ಫಲಕಾರಿಯಾಗದೆ, ಮಧ್ಯರಾತ್ರಿ ಸಾವನ್ನಪ್ಪಿದ್ದಾನೆ ಎಂದು ಅವರ ತಂದೆ ಬಡಿಗೇರ್‌ ವೀರಣ್ಣ ನೀಡಿದ ಹೇಳಿಕೆ ಆಧ​ರಿ​ಸಿ ಇಟ್ಟಿಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 


Spread the love

About Laxminews 24x7

Check Also

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Spread the loveನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ  31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌  ಒಪ್ಪಿಗೆ ನೀಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ