Breaking News

ಹಗರಿಬೊಮ್ಮನಹಳ್ಳಿ: ಜೀವನದಲ್ಲಿ ಜಿಗುಪ್ಸೆ ವಿಷಸೇವಿಸಿ ಯುವಕ ಆತ್ಮಹತ್ಯೆ

Spread the love

ಹಗರಿಬೊಮ್ಮನಹಳ್ಳಿ  : ಯುವಕನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸೊನ್ನ ಗ್ರಾಮದ ನಿವಾಸಿ ಬಡಿಗೇರ್‌ ಸಿದ್ದೇಶ (22) ಎಂಬುವನೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.

 

ಮೃತ ಬಡಿಗೇರ್‌ ಸಿದ್ದೇಶ ಬಹುದಿನಗಳಿಂದ ಮೂರ್ಛೆ ರ್‍ರೋಗ ಮತ್ತು ಮೂಲವ್ಯಾಧಿ ಕಾಯಿಲೆಗಳಿಂದ ಬಳಲುತ್ತಿದ್ದು, ಇದರಿಂದ ಜಿಗುಪ್ಸೆ ಹೊಂದಿದ್ದನೆಂದು ಎಂದು ಹೇಳಲಾಗುತ್ತಿದೆ. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ವಿಷ ಸೇವಿಸಿದ್ದಾನೆ.

ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ!

ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಚಿಕಿತ್ಸೆ ಫಲಕಾರಿಯಾಗದೆ, ಮಧ್ಯರಾತ್ರಿ ಸಾವನ್ನಪ್ಪಿದ್ದಾನೆ ಎಂದು ಅವರ ತಂದೆ ಬಡಿಗೇರ್‌ ವೀರಣ್ಣ ನೀಡಿದ ಹೇಳಿಕೆ ಆಧ​ರಿ​ಸಿ ಇಟ್ಟಿಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ