Breaking News

ಅಸಂಸದೀಯ ಪದ ಬಳಕೆ: ರಮೇಶ್‌ ಕುಮಾರ್‌- ಸುಧಾಕರ್ ಜಟಾಪಟಿ

Spread the love

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಕಾಂಗ್ರೆಸ್‌ನ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಮಧ್ಯದ ಜಟಾಪಟಿಗೆ ವಿಧಾನಸಭೆ ಬುಧವಾರ ಸಾಕ್ಷಿಯಾಯಿತು.

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ಉತ್ತರ ನೀಡಿದ ಸುಧಾಕರ್‌, ‘ಸಚಿವರನ್ನು ಒಳಗೊಂಡ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿ ಪಿಪಿಇ ಕಿಟ್‌ಗಳ ಖರೀದಿ ಮಾಡಲಾಗುತ್ತಿದೆ’ ಎಂದರು.

ಆಗ ಎದ್ದು ನಿಂತ ರಮೇಶ್‌ ಕುಮಾರ್‌, ‘ಪಿಪಿಇ ಕಿಟ್‌ಗಳ ಖರೀದಿ ದರದ ಏರಿಳಿತವನ್ನು ಸಚಿವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮೊದಲು ಕಿಟ್‌ಗಳನ್ನು ₹300ಕ್ಕೆ ಖರೀದಿಸಿದೆವು. ಆ ಬಳಿಕ ಬೆಲೆ ಹೆಚ್ಚಾಯಿತು. ವಿವಿಧ ಸಮಿತಿಗಳು ಪರಿಶೀಲಿಸಿವೆ ಎನ್ನುತ್ತಿದ್ದಾರೆ. ಈ ಸಮಿತಿಯಲ್ಲಿ ಬೃಹಸ್ಪತಿಗಳಿದ್ದಾರೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ