Breaking News

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲ್ವೆ ಟಿಕೆಟ್ ಕೌಂಟರ್ ನಾಳೆಯಿಂದ ಕಾರ್ಯಾರಂಭ, ಎಲ್ಲೆಲ್ಲಿ?

Spread the love

ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೇ ವಿಭಾಗವು ಹೆಚ್ಚುವರಿ ಟಿಕೆಟ್​ ಕಾಯ್ದಿರಿಸುವ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಿದೆ. ಇವೆಲ್ಲಾ ಕೇಂದ್ರಗಳು ನಾಳೆಯಿಂದ ಕಾರ್ಯಾರಂಭವಾಗಲಿದೆ.

ಬೆಂಗಳೂರಿನಲ್ಲಿ ಮಲ್ಲೇಶ್ವರ, ಚಿಕ್ಕಬಾಣಾವರ, ಬಾಣಸವಾಡಿ, ಬೆಂಗಳೂರು ಪೂರ್ವ, ಕಾರ್ಮೆಲರಾಂ ಮತ್ತು ವೈಟ್​ಫೀಲ್ಡ್​ ರೈಲು ನಿಲ್ದಾಣಗಳಲ್ಲಿ ಈ ಹೆಚ್ಚುವರಿ ಕೌಂಟರ್​ಗಳನ್ನು ಕಾರ್ಯಾರಂಭಗೊಳಿಸಲಾಗುವುದು.

ಜೊತೆಗೆ, ಕುಪ್ಪಂ, ಪೆನುಕೊಂಡ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗೌರಿಬಿದನೂರು ಮತ್ತು ಮದ್ದೂರು ರೈಲ್ವೇ ನಿಲ್ದಾಣಗಳಲ್ಲಿ ಸಹ ಈ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಾಗುವುದು.

ಅಕ್ಟೋಬರ್​ 20 ರಿಂದ ನವೆಂಬರ್ 30ರವರೆಗೆ ಹಬ್ಬದ ವಿಶೇಷ ರೈಲುಗಳನ್ನು ಓಡಿಸಲು ಮಂಡಳಿಯು ಯೋಜಿಸಿರುವ ಹಿನ್ನೆಲೆಯಲ್ಲಿ ಮುಂಗಡ ಟಿಕೆಟ್​ ಕಾಯ್ದಿರಿಸಲು ಬೇಡಿಕೆ ಹೆಚ್ಚಾಗಬಹುದು ಅನ್ನೋ ಕಾರಣಕ್ಕೆ ಈ ಕೇಂದ್ರಗಳನ್ನು ಸ್ಥಾಪಿಸಲಿದೆ. ಎಲ್ಲಾ ಕೇಂದ್ರಗಳು ಲಾಕ್​ಡೌನ್​ ಸಮಯದ ಮುಂಚೆ ಇದ್ದ ಕೆಲಸದ ವೇಳೆಯ ಪ್ರಕಾರವೇ ಕಾರ್ಯ ನಿರ್ವಹಿಸಲಿದೆ. ಇದಲ್ಲದೆ, ಈ ಹಿಂದೆಯೇ ತೆರೆಯಲಾಗಿದ್ದ 15 ಟಿಕೆಟ್​ ಕಾಯ್ದಿರಿಸುವ ಕೇಂದ್ರಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂಬ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ