Breaking News

ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು,

Spread the love

ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರ ನೇಮಕಾತಿ ಆದೇಶ ಹೊರಡಿಸುವ ಚಿಂತನೆ ನಡೆಸಿದೆ ಎನ್ನಲಾಗಿದೆ.

ಉಪನ್ಯಾಸಕರಾಗಿ ಆಯ್ಕೆಯಾಗಿರುವ ನೂರಾರು ಅಭ್ಯರ್ಥಿಗಳು ನೇಮಕಾತಿ ಆದೇಶ ಹೊರಡಿಸುವಂತೆ ಸರ್ಕಾರವನ್ನು ಆಗ್ರಹಿಸಿ ಶನಿವಾರ ಆರನೇ ದಿನವೂ ಪಿಯು ಮಂಡಳಿ ಮುಂಭಾಗ ಅಹೋರಾತ್ರಿ ಧರಣಿ ನಡೆಸಿದರು. ಕೊರೊನಾ ವೈರಸ್ ಸಂದರ್ಭದಲ್ಲಿ ಮಳೆ, ಗಾಳಿ ನಡುವೆಯೂ ಉಪನ್ಯಾಸಕರು ಹೆಚ್ಚು ಕಾಲ ಧರಣಿ ಮುಂದುವರೆಸಿ ಅನಾರೋಗ್ಯಕ್ಕೆ ತುತ್ತಾದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರಬಹುದು ಎಂಬ ಹಿನ್ನೆಲೆಯಲ್ಲಿ ಕೆಲ ಷರತ್ತು ವಿಧಿಸಿ ನೇಮಕಾತಿ ಆದೇಶ ಹೊರಡಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಕಾಲೇಜುಗಳು ಆರಂಭವಾದ ಬಳಿಕವೇ ಅವರ ಕರ್ತವ್ಯ ಹಾಜರಾತಿ ಪರಿಗಣಿಸುವುದಾಗಿ ಷರತ್ತು ವಿಧಿಸಿ ಈಗಾಗಲೇ ನೇಮಕಾತಿ ಆದೇಶ ಹೊರಡಿಸಲು ಚರ್ಚೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ.

 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ