Breaking News

ಬಸ್ ಪ್ರಯಾಣಿಕರಿಗೆ ಗುಡ್‌ ನ್ಯೂಸ್..!

Spread the love

ಬೆಂಗಳೂರು : ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಕೊರೋನಾ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಟಿಕೆಟ್‌ಗಳಲ್ಲಿ ಮುದ್ರಿಸಿ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುತ್ತಿದೆ.

ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಪ್ರತಿ ನಿತ್ಯ ಲಕ್ಷಾಂತರ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ನಿಗಮ ನೀಡುವ ಪ್ರತಿ ಟಿಕೆಟ್‌ನಲ್ಲಿ ‘ಮಾಸ್ಕ್‌ ಧರಿಸಿ’, ‘ದೈಹಿಕ ಅಂತರ ಪಾಲಿಸಿ’, ‘ಕೈಗಳ ಸ್ವಚ್ಛತೆ ಕಾಪಾಡಿ’, ‘ಆರಂಭಿಕ ಕೋವಿಡ್‌-19 ಪರೀಕ್ಷೆಯು ಜೀವ ಉಳಿಸುತ್ತದೆ’ ಎಂದು ಮುದ್ರಿಸಿ ಟಿಕೆಟ್‌ ವಿತರಿಸುತ್ತಿದೆ.

ಬಸ್ ಪ್ರಯಾಣಿಕರಿಗೆ ಗುಡ್‌ ನ್ಯೂಸ್..!

ನಿಗಮವು ಈ ಹಿಂದೆಯೂ ಕೂಡ ಹಲವು ಬಾರಿ ಚುನಾವಣೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿಯಾನಗಳು, ಸ್ವಚ್ಛತೆ, ಪರಿಸರ ಸಂರಕ್ಷಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಟಿಕೆಟ್‌ನಲ್ಲಿ ಮುದ್ರಿಸಿ ಪ್ರಯಾಣಿಕರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸಿತ್ತು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ