ನವೆಂಬರ್ 3 ರಂದು ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ , ಹಣದ ಆಮಿಷವೊಡ್ಡುತ್ತಿರುವ ಕುರಿತು ಅರೋಪ- ಪ್ರತ್ಯಾರೋಪಗಳ ಪ್ರಕ್ರಿಯೆಯೂ ಶುರುವಿಟ್ಟುಕೊಂಡಿದೆ .
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರನ್ನೊಳಗೊಂಡ ನಿಯೋಗವೊಂದು , ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಮುಖ್ಯ ಚುನಾವಣೆ ಅಧಿಕಾರಿಗೆ ಇಂದು ದೂರು ನೀಡಿತು .
ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತಾಡಿದ ಅಹ್ಮದ್, ”ಬಿಜೆಪಿ ನಾಯಕರು ಹಣ ಹಂಚುವುದರ ಜೊತೆಗೆ ತಮಗೆ ವೋಟು ನೀಡಿದರೆ ಮಾತ್ರ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವುದಾಗಿ ಮತದಾರರನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ . ಹಣ ಹಂಚುತ್ತಿರುವ ಬಗ್ಗೆ ವಿಡಿಯೊ ಸಾಕ್ಷ್ಯವನ್ನು ಸಹ ಆಯೋಗಕ್ಕೆ ಒದಗಿಸಿದ್ದೇವೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ವಿನಂತಿಸಿಕೊಂಡಿದ್ದೇವೆ ,” ಎಂದರು .