Home / ಅಂತರಾಷ್ಟ್ರೀಯ / ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು .

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು .

Spread the love

ನವೆಂಬರ್ 3 ರಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು .

ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ , ಬಿಜೆಪಿಯ ಅಭ್ಯರ್ಥ ಮುನಿರತ್ನ ನಾಯ್ಡು ಎಲ್ಲ ಮತದಾರರಿಗೆ ಮೋಸ ಮಾಡಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸಲು ಇದು ಉತ್ತಮ ಅವಕಾಶ , ಪ್ರಜಾಪ್ರಭುತ್ವ ಉಳಿಯಬೇಕಾದರೆ ಮುನಿರತ್ನರನ್ನು ಸೋಲಿಸಲೇಬೇಕು ಎಂದು ಮತದಾರರನ್ನು ಆಗ್ರಹಿಸಿದರು .

” ಸ್ವಾರ್ಥ , ಅಧಿಕಾರದ ಲಾಲಸೆಯಿಂದ ಮುನಿರತ್ನ ಬಿಜೆಪಿಗೆ ಹೋದ , ಅವನನ್ನು ಮತ್ತೆ ಶಾಸಕನಾಗಿ ಆರಿಸಿದರೆ ಅದು ಪ್ರಜಾಪ್ರಭುತ್ವ   ದ ಕಗ್ಗೊಲೆ . ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ನಾನು ಮುಖ್ಯಮಂತ್ರಿಯಾಗಿದ್ದಾಗ ಅವನಿಗೆ ಹಣ ಒದಗಿಸುತ್ತಿದ್ದೆ . ದಿನ ಬೆಳಗಾದರೆ ಅವನು ನನ್ನ ಮುಂದೆ ಬಂದು ನಿಲ್ಲುತ್ತಿದ್ದ . ಸಾಯಂಕಾಲ ಪುನಃ ನನಗೆ ಮುಖ ತೋರಿಸಿಯೇ ತನ್ನ ಮನೆಗೆ ಹೋಗುತ್ತಿದ್ದ . ದುಡ್ಡು ಕೊಡಿ ದುಡ್ಡು ಕೊಡಿ ಅಂತ ಪ್ರತಿದಿನ ಹಿಂಸೆ ಮಾಡುತ್ತಿದ್ದ . ಅವನು ಆರ್ ಆರ್ ನಗರ ಅಭಿವೃದ್ಧಿಯಾಗಿದೆ ಅಂತ ಕೊಚ್ಚಿಕೊಳ್ಳುತ್ತಿದ್ದರೆ ಅದು ನಾನು ಒದಗಿಸಿದ ಹಣದಿಂದ ಅನ್ನುವುದನ್ನು ನೆನಪಿಟ್ಟುಕೊಳ್ಳಿ . ಅದೇನೋ ಹೇಳ್ತಾರಲ್ಲ , ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ , ಹಾಗಿದೆ ಅವನ ಕಥೆ ,” ಎಂದ ಸಿದ್ದರಾಮಯ್ಯ ಕ್ಷೇತ್ರದ ಅಭಿವೃದ್ಧಿಗೆ ತಾನು ಕಾರಣ ಅಂದರು .

” ಅವನೇನು ತನ್ನ ಮನೆಯಿಂದ ದುಡ್ಡು ತಂದು ಅಭಿವೃದ್ಧಿ ಮಾಡಿದ್ದಾನೆಯೇ ? ಸಿದ್ದರಾಮಯ್ಯ ಇಲ್ಲದಿದ್ದರೆ ಅವನಿಗೆ ಒಂದು ರೂಪಾಯಿ ಸಹ ಸಿಗುತ್ತಿರಲಿಲ್ಲ . ನಾವು ಮತ್ತೆ ಅಧಿಕಾರಕ್ಕೆ ಬಂದರೆ ಮತ್ತೆ 10 ಕೆಜಿ ಅಕ್ಕಿ ಕೊಡುತ್ತೇವೆ ,” ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು .


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ