ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ.
ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅವರಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಈ ಬಗ್ಗೆ ಎರಡೂ ಠಾಣೆಗಳಲ್ಲಿ ಕೇಸ್ ದಾಖಲಾಗಿದೆ.