Breaking News

ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ.

Spread the love

ಬೆಂಗಳೂರು: ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ. ಈ ಸಂಬಂಧ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

ಮಾಧ್ಯಮಗಳು, ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಬೆನ್ನಿಗೆ ನಿಂತಿದೆ. ನಮ್ಮ ಕೆಪಿಸಿಸಿ ಅಧ್ಯಕ್ಷರು ಈಗಲಾದ್ರೂ ನಮ್ಮ ಪರ ನಿಲ್ಲಲಿ. ನನ್ನ ಪರ ಯಾಕೆ ನಿಂತಿಲ್ಲವೆಂದು ಇಂದು ಡಿಕೆ ಶಿವಕುಮಾರ್​ ಅವರಿಗೆ ಕೇಳುತ್ತೇನೆ. ಸಂಪತ್ ರಾಜ್ ಆಸ್ಪತ್ರೆಯಿಂದ ಏಕೆ ಓಡಿ ಹೋಗಬೇಕಿತ್ತು.. ಅವರು ತಪ್ಪು ಮಾಡಿದ್ದರಿಂದ ಓಡಿ ಹೋಗಿದ್ದಾರೆ. ನಾನು ಯಾವುದೇ ದ್ವೇಷದ ರಾಜಕಾರಣವನ್ನು ಮಾಡಿಲ್ಲ. ಈ ಹಿಂದೆಯೂ ಮಾಡಿಲ್ಲ, ಇನ್ನುಮುಂದೆಯೂ ಮಾಡಲ್ಲ.

ಸಂಪತ್ ರಾಜ್ ನನ್ನ ಜತೆ ಚೆನ್ನಾಗಿಯೇ ಇದ್ದರು. ನನ್ನ ಜತೆಗಿದ್ದು ಇಂತಹ ಕೆಲಸ ಮಾಡುತ್ತಾರೆಂದು ಗೊತ್ತಿರಲಿಲ್ಲ. ಘಟನೆಯ ಬಳಿಕ ಸಂಪತ್ ರಾಜ್‌ರನ್ನ ಭೇಟಿಯಾಗಿಲ್ಲ. ಕಾಂಗ್ರೆಸ್ ಕೂಡ ನಮ್ಮನ್ನು ಕರೆಸಿ ಮಾತನಾಡಿಲ್ಲ ಎಂದು ಹೇಳಿದ್ರು.

ಇನ್ನು ನನಗೆ ನ್ಯಾಯ ಕೊಡಿಸುವುದಾಗಿ ಮಾತ್ರ ಡಿಕೆಶಿ ಹೇಳಿದ್ದಾರೆ. ನನಗೆ ಕಾಂಗ್ರೆಸ್ ಪಕ್ಷ ರಕ್ಷಣೆಗೆ ನಿಂತಿದೆ. ಘಟನೆಯ ಬಗ್ಗೆ ಹೈಕಮಾಂಡ್ ಗಮನಕ್ಕೂ ತರುತ್ತೇನೆ. ಮನೆಗೆ ಬೆಂಕಿ ಹಚ್ಚಿದ್ದರಿಂದ ಎಲ್ಲೋ ಹೊರಗಿರುವಂತಾಗಿದೆ. ರಾಜ್ಯದಲ್ಲಿ ಇಂತಹ ಘಟನೆ ಮರುಕಳಿಸಬಾರದು. ಕಾನೂನು ಪ್ರಕಾರ ಎಲ್ಲಾ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನನಗೆ ಸಿದ್ದರಾಮಯ್ಯ, ಜಮೀರ್ ಧೈರ್ಯ ತುಂಬುತ್ತಿದ್ದಾರೆ ಎಂದು ಟಿವಿ9ಗೆ ‘ಕೈ’ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ