Breaking News

ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಬ್ಬ ಮಾಜಿ ಶಾಸಕ ಮತ್ತು ಒಬ್ಬ ಹಾಲಿ ಶಾಸಕರನ್ನು ತಮ್ಮ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿಕೊಂಡಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಶೃಂಗೇರಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕವಾಗಿದ್ದಾರೆ. ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಎಂ.ಪಿ. ರೇಣುಕಾಚಾರ್ಯ ಮತ್ತು ಡಿ.ಎನ್. ಜೀವರಾಜ್ ಅವರು ಈ ಹಿಂದೆ ಬಿ ಎಸ್‌ ಯಡಿಯೂರಪ್ಪ ಅವರಿಗೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಇದರೊಂದಿಗೆ ಬಿಎಸ್‌ ಯಡಿಯೂರಪ್ಪ ಆಪ್ತರಿಗೆ ಸರ್ಕಾರದಲ್ಲಿ ಆಯಕಟ್ಟಿನ ಸ್ಥಾನಮಾನಗಳು ಮುಂದುವರಿಕೆ ಆದಂತಾಗಿದೆ.

 


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ