Breaking News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Spread the love

ಮೈಸೂರು: ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ ಇದ್ದಿದ್ದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಸಿಎಂ, ಮಗಳ ಕೈ-ಕಾಲು ಮುರಿಯಿರಿ. ಅವಳಿಗೆ ಜಾಮೀನು ಸಿಗಬಾರದು. ಮಗಳ ರಕ್ಷಣೆಗೆ ನಾವು ಹೋಗುವುದಿಲ್ಲ ಅಂತ ಅಮೂಲ್ಯಾ ತಂದೆ ಹೇಳಿದ್ದಾರೆ. ಬಹಳ ಮುಖ್ಯವಾಗಿ ಇದರ ಹಿಂದೆ ಇರುವ ಸಂಘಟನೆ ಯಾವುದು? ಯಾರು ಈ ರೀತಿ ಮನೋಭಾವ ಬೆಳೆಸುತ್ತಿದ್ದಾರೆ ಎನ್ನುವುದನ್ನು ತಿಳಿಯಬೇಕಿದೆ. ಜೊತೆಗೆ ಅವರ ಮೇಲೂ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಇದು ಇಲ್ಲಿಗೆ ಕೊನೆಯಾಗುವುದಿಲ್ಲ ಎಂದರು.

ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಷಡ್ಯಂತ್ರ ನಡೆದಿದೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ. ಮುಂದಿನ ದಿನಗಳಲ್ಲಿ ಇದರ ಹಿಂದೆ ಯಾವ ಸಂಘಟನೆ ಇದೆ ಎಂದು ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ತನಿಖೆಯಿಂದ ಅಮೂಲ್ಯಾಳಿಗೆ ಯಾರು ಪ್ರೇರಣೆ ಕೊಡುತ್ತಿದ್ದಾರೆ ಎನ್ನುವುದು ಗೊತ್ತಾಗಲಿದೆ ಎಂದು ತಿಳಿಸಿದರು

 


Spread the love

About Laxminews 24x7

Check Also

ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದುವರೆಯುತ್ತಿದ್ದೇವೆ,

Spread the loveಚಾಮರಾಜನಗರ: “ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಐದು ವರ್ಷ ಮುಂದುವರಿಯುತ್ತೇವೆ” ಎಂದು ಅರಣ್ಯ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ