Breaking News

Lockdown 4.0: ದೇಶಾದ್ಯಂತ ಲಾಕ್​ಡೌನ್​ ವಿಸ್ತರಣೆ; ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ

Spread the love

ಬೆಂಗಳೂರು (ಮೇ 17): ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್​ಡೌನ್​ ವಿಸ್ತರಿಸಲಾಗಿದೆ. 4ನೇ ಹಂತದ ಲಾಕ್​ಡೌನ್​ ಮಾರ್ಗಸೂಚಿಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಆಯಾ ರಾಜ್ಯಗಳಲ್ಲಿ ಲಾಕ್​ಡೌನ್​ ಸಡಿಲಗೊಳಿಸುವ ಸ್ವಾತಂತ್ರ್ಯವನ್ನು ಮುಖ್ಯಮಂತ್ರಿಗಳಿಗೆ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ.

ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಲಾಕ್ ಡೌನ್ 4.0 ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಅಧಿಕಾರಿಗಳ ಜೊತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಈ ಸಭೆಯ ಬಳಿಕ ರಾಜ್ಯದ ಲಾಕ್​ಡೌನ್​ ಸಡಿಲಿಕೆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಮೇ 19ರವರೆಗೆ 3ನೇ ಹಂತದ ಲಾಕ್​ಡೌನ್​ ಮುಂದುವರೆಸಲು ಆದೇಶ ನೀಡಿದೆ. 4ನೇ ಹಂತದ ಲಾಕ್​ಡೌನ್​ ರೂಪರೇಷೆಗಳ ಬಗ್ಗೆ ಇಂದು ನಿರ್ಧಾರವಾಗಲಿದೆ. ಈ ಸಭೆಯ ಬಳಿಕ ರಾಜ್ಯದ ಲಾಕ್​ಡೌನ್ ಮಾರ್ಗಸೂಚಿ ಬಿಡುಗಡೆಯಾಗಲಿದೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

Spread the loveಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ