Breaking News
Home / ಜಿಲ್ಲೆ / ಬೆಂಗಳೂರು / Lockdown 4.0: ದೇಶಾದ್ಯಂತ ಲಾಕ್​ಡೌನ್​ ವಿಸ್ತರಣೆ; ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ

Lockdown 4.0: ದೇಶಾದ್ಯಂತ ಲಾಕ್​ಡೌನ್​ ವಿಸ್ತರಣೆ; ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ

Spread the love

ಬೆಂಗಳೂರು (ಮೇ 17): ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್​ಡೌನ್​ ವಿಸ್ತರಿಸಲಾಗಿದೆ. 4ನೇ ಹಂತದ ಲಾಕ್​ಡೌನ್​ ಮಾರ್ಗಸೂಚಿಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಆಯಾ ರಾಜ್ಯಗಳಲ್ಲಿ ಲಾಕ್​ಡೌನ್​ ಸಡಿಲಗೊಳಿಸುವ ಸ್ವಾತಂತ್ರ್ಯವನ್ನು ಮುಖ್ಯಮಂತ್ರಿಗಳಿಗೆ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ.

ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಲಾಕ್ ಡೌನ್ 4.0 ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಅಧಿಕಾರಿಗಳ ಜೊತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಈ ಸಭೆಯ ಬಳಿಕ ರಾಜ್ಯದ ಲಾಕ್​ಡೌನ್​ ಸಡಿಲಿಕೆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಮೇ 19ರವರೆಗೆ 3ನೇ ಹಂತದ ಲಾಕ್​ಡೌನ್​ ಮುಂದುವರೆಸಲು ಆದೇಶ ನೀಡಿದೆ. 4ನೇ ಹಂತದ ಲಾಕ್​ಡೌನ್​ ರೂಪರೇಷೆಗಳ ಬಗ್ಗೆ ಇಂದು ನಿರ್ಧಾರವಾಗಲಿದೆ. ಈ ಸಭೆಯ ಬಳಿಕ ರಾಜ್ಯದ ಲಾಕ್​ಡೌನ್ ಮಾರ್ಗಸೂಚಿ ಬಿಡುಗಡೆಯಾಗಲಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ