ಬೆಂಗಳೂರು: ರಾಜ್ಯದ ಜನತೆಯ ಬೇಡಿಕೆ ಹಿನ್ನೆಲೆಯಲ್ಲಿ ಭಾನುವಾರ (ಮೇ 31 2020) ರಂದು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ.
ಆದರೆ, ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಅದರಂತೆ ಕಳೆದ ಭಾನುವಾರ ರಾಜ್ಯದಾದ್ಯಂತ ಸಂಪೂರ್ಣ ಲಾಕ್ಡೌನ್ ಆಗಿತ್ತು.
ಆದ್ರೆ ಸರ್ಕಾರ ರಾಜ್ಯದ ಜನರ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್ಡೌನ್ ಹಿಂಪಡೆದಿದೆ. ಹೀಗಾಗಿ ಎಲ್ಲ ದೈನಂದಿನ ಚಟುವಟಿಕೆಗಳು ಎಂದಿನಂತೆ ನಡೆಯಲಿವೆ.