Breaking News
Home / ಜಿಲ್ಲೆ / ಜನರ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಹಿಂಪಡೆದಿದೆ:B.S.Y.

ಜನರ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಹಿಂಪಡೆದಿದೆ:B.S.Y.

Spread the love

ಬೆಂಗಳೂರು: ರಾಜ್ಯದ ಜನತೆಯ ಬೇಡಿಕೆ ಹಿನ್ನೆಲೆಯಲ್ಲಿ ಭಾನುವಾರ (ಮೇ 31 2020) ರಂದು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ವೈರಸ್‌ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ.

ಆದರೆ, ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್‌ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಅದರಂತೆ ಕಳೆದ ಭಾನುವಾರ ರಾಜ್ಯದಾದ್ಯಂತ ಸಂಪೂರ್ಣ ಲಾಕ್‌ಡೌನ್ ಆಗಿತ್ತು.

ಆದ್ರೆ ಸರ್ಕಾರ ರಾಜ್ಯದ ಜನರ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಹಿಂಪಡೆದಿದೆ. ಹೀಗಾಗಿ ಎಲ್ಲ ದೈನಂದಿನ ಚಟುವಟಿಕೆಗಳು ಎಂದಿನಂತೆ ನಡೆಯಲಿವೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ