Breaking News
Home / ಜಿಲ್ಲೆ / ಬೆಂಗಳೂರು / ಇಂದು ಬೆಳಿಗ್ಗೆ 11ಕ್ಕೆ ಯಡಿಯೂರಪ್ಪ ಸುದ್ದಿಗೋಷ್ಠಿ; ಮಹತ್ವದ ಮಾಹಿತಿ ನೀಡಲಿದ್ದಾರೆ ಸಿಎಂ?

ಇಂದು ಬೆಳಿಗ್ಗೆ 11ಕ್ಕೆ ಯಡಿಯೂರಪ್ಪ ಸುದ್ದಿಗೋಷ್ಠಿ; ಮಹತ್ವದ ಮಾಹಿತಿ ನೀಡಲಿದ್ದಾರೆ ಸಿಎಂ?

Spread the love

ಬೆಂಗಳೂರು (ಮೇ 6): ಲಾಕ್​ಡೌನ್​ ಆರಂಭವಾದಾಗಿನಿಂದಲೂ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುತ್ತಲೇ ಇದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸದ್ಯ ರಾಜ್ಯದ ಪರಿಸ್ಥಿತಿ ಹೇಗಿದೆ ಎನ್ನುವುದರ ಬಗ್ಗೆ ಬಿಎಸ್​ವೈ ಇಂದು 11 ಗಂಟೆಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ.

ಲಾಕ್​ಡೌನ್​ ಶುರುವಾದ ದಿನಾಂಕ ಅಂದರೆ ಮಾ.21 ನೇ ತಾರೀಕಿನಿಂದ ಇಲ್ಲಿಯವರೆಗಿನ  ಪರಿಣಾಮ, ಕೋರೋನಾ ತಡೆಗಟ್ಟಲು ಲಾಕ್‌ಡೌನ್ ಎಷ್ಟರಮಟ್ಟಿಗೆ ಸಹಕಾರಿಯಾಗಿದೆ,  ಕೊರೊನಾ ತಡೆಗಟ್ಟುವಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳೇನು, ಸರ್ಕಾರದ ನಿರ್ಧಾರಗಳ ಪ್ರಯೋಜನಗಳೇನು, ಜನಸ್ಪಂದನೆ ಹೇಗಿತ್ತು ಎನ್ನುವ ಬಗ್ಗೆ ಸಿಎಂ ಮಾಹಿತಿ ನೀಡಲಿದ್ದಾರೆ.

ಪೊಲೀಸರು, ಪೌರ ಕಾರ್ಮಿಕರು, ವೈದ್ಯರು ಸೇರಿ ಸಾಕಷ್ಟು ಜನರು ಕೊರೋನಾ ವಿರುದ್ಧ ಹೋರಾಟಕ್ಕೆ ಟೊಂಕ ಕಟ್ಟಿ ನಿಂತಿದ್ದಾರೆ. ಇವರ ಸಹಕಾರ ಹಾಗೂ ಸಹಾಯವನ್ನು ಸುದ್ದಿಗೋಷ್ಠಿಯಲ್ಲಿ ಬಿಎಸ್​ವೈ ನೆನೆಯುವ ಸಾಧ್ಯತೆ ಇದೆ.

ಈಗಾಗಲೇ ಬೆಂಗಳೂರಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಅದರ ಬಗೆಗಿನ ಮಾಹಿತಿ, ರಾಜ್ಯದ ಆರ್ಥಿಕ ಸ್ಥಿತಿಗತಿ, ಆರ್ಥಿಕ ಪುನಶ್ಚೇತನ ಕ್ಕಾಗಿ ತೆಗೆದುಕೊಳ್ಳುತ್ತಿರುವ ಕ್ರಮಗಳು, ಕಾರ್ಮಿಕರ ಪ್ರಯಾಣ ವಿಚಾರದಲ್ಲಿ ಆದ ಗೊಂದಲಗಳು, ಸರ್ಕಾರದ ಕ್ರಮಗಳು,ವಿಪಕ್ಷಗಳ ಟೀಕೆ, ಆರ್ಥಿಕ ಪುನಶ್ಚೇತನಕ್ಕೆ ಮುಂದಿನ ಹೊಸ ಕ್ರಮಗಳು ಸೇರಿ 46 ದಿನಗಳ ಕರ್ನಾಟಕ ಲಾಕ್‌ಡೌನ್ ಬಗ್ಗೆ ಸಮಗ್ರ ಮಾಹಿತಿಯನ್ನು ಸಿಎಂ ಬಿಚ್ಚಿಡಲಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ