Breaking News

ಸಿಎಂ ರಿಲೀಫ್ ಫಂಡ್‍ಗೆ 2 ಕೋಟಿ ರೂ. ದೇಣಿಗೆ ನೀಡಿದ ಕೋರೆ………

Spread the love

ಬೆಂಗಳೂರು: ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ರಾಜ್ಯಸಭಾ ಸದಸ್ಯ, ಕೆಎಲ್‍ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ್ ಕೋರೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಭಾಕರ್ ಕೋರೆ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದ 2 ಕೋಟಿ ರೂ. ಚೆಕ್ ಸ್ವೀಕರಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ರಮೇಶ್ ಜಾರಕಿಹೊಳಿ, ಶಾಸಕ ಮಹಾಂತೇಶ ಕವಟಗಿಮಠ ಇದ್ದರು.

ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು ಒಂದೇ ದಿನ 20 ಜನರಿಗೆ ಸೋಂಕು ತಗುಲಿದೆ. ಈವರೆಗೂ 693 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ 29 ಮಂದಿ ಮೃತಪಟ್ಟರೆ, 354 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 309 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ