Breaking News

ಯೂರಿಯಾ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

Spread the love

ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಮರ್ಪಕವಾಗಿ ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.

‘ಸಂಘದಿಂದ ಅವಶ್ಯ ಪ್ರಮಾಣದಲ್ಲಿ ಯೂರಿಯಾ ನೀಡುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಇತರ ಗೊಬ್ಬರಗಳ ಬದಲಿಗೆ ಯೂರಿಯಾವನ್ನೇ ಕೊಡಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಸಂಚಾಲಕ ಲಕ್ಕಪ್ಪ ಬಿಜ್ಜನ್ನವರ, ರಾಜು ಗಾಣಗಿ, ವಿಠ್ಠಲ ದೊಡಗೌಡ್ರ, ಬಸಪ್ಪ ದಳವಾಯಿ, ಮಲ್ಲಪ್ಪ ದಳವಾಯಿ, ವಿಠ್ಠಲ ಗಣಿ, ಕಲ್ಲಪ್ಪ ಕಡೆಮನಿ, ರಾಮಣ್ಣ ಕೆಸರಡ್ಡಿ, ರಮೇಶ ಹಳ್ಳೂರ ಇದ್ದರು.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ