Breaking News

ಬಿಎಸ್ ವೈಗೆ ಮತ್ತೆ ಸಂಕಷ್ಟ : ಡಿ ನೋಟಿಫಿಕೇಷನ್ ಪ್ರಕರಣ, ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Spread the love

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ತಮ್ಮ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣದ ತನಿಖೆಗೆ ಕಲಬುರಗಿ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಗಂಗೇನಹಳ್ಳಿಯಲ್ಲಿ ಬಳಿಯ ಮಠದಹಳ್ಳಿ 1.11ಎಕರೆ ಡಿ ನೋಟಿಫಿಕೇಷನ್ ಕುರಿತಂತೆ 2015ರಲ್ಲಿ ಜಯಕುಮಾರ್ ಹಿರೇಮಠ್ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಹೆಚ್.ಡಿ ಕುಮಾರಸ್ವಾಮಿ ಎರಡನೇ ಆರೋಪಿಯಾಗಿದ್ದಾರೆ.

ಸದ್ಯ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಮಾಡಿದ್ದ ಅರ್ಜಿಯನ್ನು ಕಲಬುರ್ಗಿ ಸಂಚಾರಿ ಹೈಕೋರ್ಟ್​​​ನ ನ್ಯಾ. ಮೈಕಲ್ ಡಿ‌ ಕುನ್ಹಾ ಅವರು ಎಫ್ಐಆರ್ ರದ್ದುಪಡಿಸಲು ನಿರಾಕರಿಸಿದ್ದು, ವಜಾ ಮಾಡಿ ತನಿಖೆಗೆ ಆದೇಶ ನೀಡಿದ್ದಾರೆ. ಅಲ್ಲದೇ ಪ್ರಕರಣದ ರದ್ದು ಕೋರಿ ಅರ್ಜಿ ಸಲ್ಲಿಕೆ ಮಾಡಿದ ಹಿನ್ನೆಲೆ ಕೋರ್ಟ್​ ಯಡಿಯೂರಪ್ಪ ಅವರಿಗೆ 25 ಸಾವಿರ ರೂಪಾಯಿಗಳನ್ನು ದಂಡ ವಿಧಿಸಿದೆ.


Spread the love

About Laxminews 24x7

Check Also

ಪರಿಸರ ದಿನಾಚರಣೆ ಮುನ್ನಾ ದಿನ ಅರಣ್ಯ ಪ್ರದೇಶದಲ್ಲಿ ಮಕ್ಕಳ ಸಂಭ್ರಮ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ ಸಸಿ ನೆಟ್ಟ ಮಕ್ಕಳು

Spread the love ಪರಿಸರ ದಿನಾಚರಣೆ ಮುನ್ನಾ ದಿನ ಅರಣ್ಯ ಪ್ರದೇಶದಲ್ಲಿ ಮಕ್ಕಳ ಸಂಭ್ರಮ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ