Breaking News
Home / ಜಿಲ್ಲೆ / ನಾವು ಮುಂಬೈ ಪಡದೇ ತಿರುತ್ತೇವೆ : ಡಿಸಿಎಂ ಲಕ್ಷ್ಮಣ ಸವದಿ

ನಾವು ಮುಂಬೈ ಪಡದೇ ತಿರುತ್ತೇವೆ : ಡಿಸಿಎಂ ಲಕ್ಷ್ಮಣ ಸವದಿ

Spread the love

ಬೆಂಗಳೂರು : ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು. ಅಲ್ಲಿಯವರೆಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈಯನ್ನು ಕರ್ನಾಟಕದ ಭಾಗ ಎಂದು ತೀರ್ಮಾನಿಸಿದ್ದೇವೆ. ಹಾಗಾಗಿ ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಿ ಎಂದಿದ್ದಾರೆ.

ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಸಂಬಂಧ ಮಹಾಜನ್​ ತೀರ್ಪು ಬಂದಾಗಿದೆ. ಇನ್ನು ಮುಂಬೈ ಮೇಲೆ ನಮಗೂ ಹಕ್ಕಿದ್ದು, ಮುಂಬೈ ನಮಗೆ ಬೇಕು ಎಂದು ಈಗಿನಿಂದಲೇ ಬೇಡಿಕೆ ಇಡಲು ಶುರು ಮಾಡುತ್ತೇವೆ.

ನಮ್ಮ ಬೇಡಿಕೆ ಈಡೇರುವವರೆಗೂ ಮುಂಬೈನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಇಡಲು ಆಗ್ರಹಿಸುತ್ತೇವೆ. ನಾವು ಮುಂಬೈಯನ್ನು ಪಡೆದೇ ಪಡೆಯುತ್ತೇವೆ ಎಂದು ಡಿಸಿಎಂ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ