Breaking News

ಗೃಹ ಸಚಿವರ ಜತೆ ಪ್ರಕರಣ ವಾಪಸ್ ಪಡೆಯುವಂತೆ ಚರ್ಚೆ ನಡೆಸಿದದ್ದೇನೆ: ಸಚಿವ ಈಶ್ವರಪ್ಪ..!

Spread the love

ಬೆಳಗಾವಿ: ನಗರದಲ್ಲಿ ರಾಯಣ್ಣ ಪುತ್ಥಳಿ ಗಲಾಟೆಗೆ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ವಾಪಸ್ ಪಡೆಯುವ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಇಷ್ಟು ಸುಲಭವಾಗಿ ಮೂರ್ತಿ ವಿವಾದ ಇತ್ಯರ್ಥ ಆಗುತ್ತದೆ ಅಂತಾ ನನಗೆ ಗೊತ್ತಿರಲಿಲ್ಲ. ಶಿವಾಜಿ, ರಾಯಣ್ಣ ಮೂರ್ತಿ ವಿವಾದ ಇತ್ಯರ್ಥವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಇಬ್ಬರ ಹೋರಾಟ ಸ್ಮರಣೀಯವಾಗಿದೆ. ಕೆಲ ಸಂಕುಚಿತ ಭಾವನೆ ಬೇರೆ ಬೇರೆ ಉಂಟಾಗಿತ್ತು. ನಿನ್ನೆ ಆಗಿರೋ ತೀರ್ಮಾನ ರಾಷ್ಟ್ರ ಭಕ್ತರಿಗೆ ಸಂತೋಷ ತಂದಿದೆ. ರಾಯಣ್ಣ, ಶಿವಾಜಿ ಇಬ್ಬರು ಜಾತಿ, ಭಾಷೆಯನ್ನು ಮೀರಿದ್ದಾರೆ. ಬೆಳಗಾವಿಯಲ್ಲಿ ಆಗಿರೋ ತೀರ್ಮಾನ ದೇಶಕ್ಕೆ ಮಾದರಿ.

ತೀರ್ಮಾನದಿಂದ ಎಲ್ಲರಿಗೂ ಸಂತೋಷ ಆಗಿದೆ ಎಂದಿದ್ದಾರೆ.


Spread the love

About Laxminews 24x7

Check Also

ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸುವುದಿಲ್ಲ: ಸುಪ್ರೀಂ

Spread the loveನವದೆಹಲಿ: ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ನೀಡಿದರೆ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ನಾವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ