Breaking News

ರೈತರಿಗೆ ತೊಂದರೆಯಾದರೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ: ಬಿ.ಸಿ ಪಾಟೀಲ

Spread the love

ಬೆಳಗಾವಿ: ನಗರಕ್ಕೆ ಸೋಮವಾರ ಆಗಮಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಪರವಾಗಿ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರ್ಯಕರ್ತರು ಪಕ್ಷದ ಆಸ್ತಿ ಹಾಗೂ ರೈತರು ದೇಶದ ಬೆನ್ನೆಲುಬು ನಿಮ್ಮೆಲ್ಲರ ಸಮಸ್ಯೆಗಳಿಗೆ ಸದಾ ಸ್ಪಂದಿಸುವೆ ಎಂದು ಹೇಳಿದರು.

 

ರೈತರ ಬಗ್ಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಏನಾದರೂ ತೊಂದರೆ ಇದ್ದರೆ ನಮಗೆ ತಿಳಿಸಿದರೆ ಅದಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಂಜಯ ಪಾಟೀಲ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ, ಸುಭಾಷ್ ಪಾಟೀಲ ಮಹೇಶ್ ಮೋಹಿತೆ. ರೈತ ಮೋರ್ಚಾದ ಪ್ರದೀಪ್ ಸಾಣಿಕೊಪ್ಪ, ವೀರಭದ್ರ ನೀತಿನ್ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಕೆಪಿಎ ಆಸರೆ ಯೋಜನೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ

Spread the loveಗೋಕಾಕ: ಅವಿಸ್ಮರಣೀಯ ನೆನಪು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಸದಾ ನೆನಪಿನಲ್ಲಿರುವಂತೆ ಮಾಡುವ ಛಾಯಾಗ್ರಾಹಕರಿಗೆ ಕೆಪಿಎ ಆಸರೆ ಯೋಜನೆ ಉಪಯುಕ್ತವಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ