Breaking News

ಬಿ.ವೈ. ಪವಾರಗೆ ‘ತಾಂತ್ರಿಕ ರತ್ನ’ ಪ್ರಶಸ್ತಿ

Spread the love

ಬೆಳಗಾವಿ: ‘ದೇಶ ಕಟ್ಟುವ ಪ್ರಯತ್ನದಲ್ಲಿ ಸಿವಿಲ್ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ’ ಎಂದು ಬೆಂಗಳೂರಿನ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಭಾ ಪುರಸ್ಕಾರ ಪ್ರತಿಷ್ಠಾನ ಟ್ರಸ್ಟ್‌ ಅಧ್ಯಕ್ಷ ಆರ್. ನಾಗರಾಜ್ ಹೇಳಿದರು.

ಇಲ್ಲಿ ಲೋಕೋಪಯೋಗಿ ಇಲಾಖೆಯ ಎಸ್‌ಇ ಬಿ.ವೈ. ಪವಾರ ಅವರಿಗೆ ‘ತಾಂತ್ರಿಕ ರತ್ನ’ ಪ್ರಶಸ್ತಿ ನೀಡಿ ಮಾತನಾಡಿದರು.

‘ಸಿವಿಲ್‌ ಎಂಜಿನಿಯರ್‌ಗಳು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ, ಸದೃಢವಾದ ರಾಷ್ಟ್ರವನ್ನು ನಿರ್ಮಾಣ ಮಾಡಬಹುದು’ ಎಂದರು.

‘ಪ್ರತಿಷ್ಠಾನದಿಂದ ಸರ್ಕಾರದ ಅನುಮೋದನೆ ಮೇರೆಗೆ ಪ್ರಶಸ್ತಿ ನೀಡಲಾಗಿದೆ. ಕೊರೊನಾ ವೈರಸ್‌ ಕಾರಣದಿಂದಾಗಿ ಅವರರ ಕಚೇರಿಯಲ್ಲೇ ಪ್ರದಾನ ಮಾಡಲಾಗಿದೆ’ ಎಂದು ತಿಳಿಸಿದರು.

ಎಇ ಸಂಜೀವಕುಮಾರ ಹುಲಕಾಯಿ, ವಿ.ಎನ್. ಪಾಟೀಲ, ತಾಂತ್ರಿಕ ಸಹಾಯಕ ಎಂ.ಬಿ. ಗಸ್ತಿ, ನಿಬಂಧಕ ಶಿರೀಷ ಜೋಶಿ ಇದ್ದರು.


Spread the love

About Laxminews 24x7

Check Also

ಎಲ್ ನಿನೋ ಎಫೆಕ್ಟ್ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ

Spread the loveಬೆಂಗಳೂರು: ಎಲ್‌ನಿನೋ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ