Breaking News

ಜಿಐಟಿ ಎಂಬಿಎ ವಿಭಾಗದ ವಾರ್ಷಿಕೋತ್ಸವ

Spread the love

ಬೆಳಗಾವಿ: ಇಲ್ಲಿನ ಕೆಎಲ್‌ಎಸ್‌ ಗೋಗಟೆ ತಾಂತ್ರಿಕ ಕಾಲೇಜಿನ ಎಂಬಿಎ ವಿಭಾಗದಿಂದ ಆನ್‌ಲೈನ್ ಮೂಲಕ ವಾರ್ಷಿಕ ದಿನ ಆಚರಿಸಲಾಯಿತು.

ಪ್ರಾಂಶುಪಾಲ ಡಾ.ಜಯಂತ್ ಕೆ. ಕಿತ್ತೂರ ಮಾತನಾಡಿ, ‘ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಸಮಾಜಕ್ಕೆ ನಿಷ್ಠರಾಗಿರಬೇಕು. ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ನಡುವಿನ ಸಂಬಂಧವು ದೀರ್ಘಕಾಲದ್ದಾಗಿರುತ್ತದೆ. ಯಾವುದೇ ಶಿಕ್ಷಣ ಸಂಸ್ಥೆಗೆ ಅವರೇ ನಿಜವಾದ ಬ್ರಾಂಡ್ ಅಂಬಾಸಿಡರ್‌ಗಳಾಗಿರುತ್ತಾರೆ’ ಎಂದರು.

ಪ್ರಾಂಶುಪಾಲ ಡಾ.ಜಯಂತ್ ಕೆ. ಕಿತ್ತೂರ ಅಧ್ಯಕ್ಷತೆ ವಹಿಸಿದ್ದರು. ಎಂಬಿಎ ವಿಭಾಗದ ಡೀನ್ ಡಾ.ಕೃಷ್ಣ ಶೇಖರ್ ಲಾಲ್‌ದಾಸ್ ವಾರ್ಷಿಕ ವರದಿ ಮಂಡಿಸಿದರು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ವ್ಯವಸ್ಥಾಪಕ, ಮಾರುಕಟ್ಟೆ ವ್ಯವಸ್ಥಾಪಕ, ಹಣಕಾಸು ವ್ಯವಸ್ಥಾಪಕ, ಮಾನವ ಸಂಪನ್ಮೂಲ ಹಾಗೂ ಈವೆಂಟ್ ವ್ಯವಸ್ಥಾಪಕ ಪ್ರಶಸ್ತಿಗಳನ್ನು ನೀಡಲಾಯಿತು.

ಪಿ. ಮೆಹ್ತಾ ಮತ್ತು ಸೋನಮ್ ಸಂಯೋಜಿಸಿದರು. ಪ್ರೊ.ಜೋತಿ ತಲ್ರೆಜಾ ನಿರೂಪಿಸಿದರು.


Spread the love

About Laxminews 24x7

Check Also

ಕಾರವಾರ| ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧಿ ವಿತರಕ ಆತ್ಮಹತ್ಯೆ

Spread the loveಕಾರವಾರ: ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧ ವಿತರಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ